ಬಸ್‌ ದುರಂತವಾದ್ರೂ ಎಚ್ಚೆತ್ತುಕೊಳ್ಳದ KSRTC, ಫೋನ್‌ ಕಿವಿಯಲ್ಲಿಟ್ಟುಕೊಂಡೇ ಡ್ರೈವಿಂಗ್‌!

Published : Dec 26, 2025, 10:20 AM IST
KSRTC Bus Driver Mobile Phone

ಸಾರಾಂಶ

ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕ, 40 ಪ್ರಯಾಣಿಕರ ಜೀವವನ್ನು ಪಣಕ್ಕಿಟ್ಟು ಡ್ರೈವಿಂಗ್ ಮಾಡುವಾಗಲೇ ಮೊಬೈಲ್‌ನಲ್ಲಿ ಮಾತನಾಡಿದ್ದಾನೆ. ಧಾರವಾಡದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಘಟನೆಯನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.

ಧಾರವಾಡ (ಡಿ.26): ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ಅಪಘಾತವಾಗಿ 7 ಮಂದಿ ಸಾವು ಕಂಡಿರುವ ಸುದ್ದಿ ಇನ್ನೂ ಜೀವಂತವಾಗಿರುವಾಗಲೇ, ಬಸ್‌ ಡ್ರೈವರ್‌ನ ನಿರ್ಲಕ್ಷ್ಯತನದ ಚಾಲನೆ ಮತ್ತೊಮ್ಮೆ ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಡ್ರೈವರ್‌ಳ ಅಜಾಗರುಕತೆಯಿಂದಾಗಿ ಪ್ರಯಾಣಿಕರು ರಸ್ತೆಯಲ್ಲಿ ದಾರುಣವಾಗಿ ಸಾವು ಕಾಣುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ನಡುವೆಯೇ, ಕೆಎಸ್‌ಆರ್‌ಟಿಸಿ ಬಸ್‌ ಚಾಲಕನೊಬ್ಬ ಡ್ರೈವಿಂಗ್‌ ಮಾಡುವಾಗಲೇ ಫೋನ್‌ ಕಿವಿಯಲ್ಲಿಟ್ಟುಕೊಂಡು ಮಾತನಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಸೀಬರ್ಡ್‌ ಬಸ್‌ ದುರಂತವಾದರೂ ಬಸ್‌ ಚಾಲಕ ಎಚ್ಚೆತ್ತುಕೊಳ್ಳದೇ ಇರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಒಂದು ಕೈಯಲ್ಲಿ ಬಸ್‌ನ ಸ್ಟೇರಿಂಗ್‌ ಹಿಡಿದಿರುವ ಚಾಲಕ ಇನ್ನೊಂದು ಕೈನಲ್ಲಿ ಫೋನ್‌ ಹಿಡಿದುಕೊಂಡಿದ್ದಾರೆ. ಫೋನ್‌ನಲ್ಲಿ ಮಾತನಾಡುತ್ತಲೇ ಬಸ್‌ ಡ್ರೈವಿಂಗ್‌ ಮಾಡಿದ್ದಾರೆ.

ಹುಬ್ಬಳ್ಳಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ ಇದಾಗಿದ್ದು, ಬೆಂಗಳೂರಿನಿಂದ ಬೆಳಗಾವಿಯ ಕಡೆಗೆ ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿ 4 ರ ಧಾರವಾಡ ಹೊರವಲಯದಲ್ಲಿ ಘಟನೆ ನಡೆದಿದೆ.

ಹುಬ್ಬಳ್ಳಿ ಡಿಪೋ ಬಸ್‌

KA 63 F 0163 ನಂಬರ್‌ ಹೊಂದಿರುವ ಹುಬ್ಬಳ್ಳಿಯ ಡಿಪೋ ಬಸ್‌ ಇದಾಗಿದ್ದು, ಬಸ್ ನಲ್ಲಿ 40 ಜನರು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ಹುಚ್ಚಾಟಕ್ಕೆ ಸೋಶಿಯಲ್‌ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಬಸ್‌ನಲ್ಲಿಯೇ ಇದ್ದ ಪ್ರಯಾಣಿಕರೊಬ್ಬರು ಮೊಬೈಲ್ ನಲ್ಲಿ ವಿಡಿಯೋ ಚಿತ್ರಿಕರಣ ಮಾಡಿದ್ದಾರೆ. ಅದನ್ನು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿತ್ರದುರ್ಗ ಬಸ್‌ ದುರಂತ: ಮೃತ ಸಂಖ್ಯೆ 7ಕ್ಕೆ ಏರಿಕೆ, ಬಸ್‌ ಡ್ರೈವರ್‌ ರಫೀಕ್‌ ಸಾವು
ಎರಡನೇ ವಿಶ್ವ ಆಯುರ್ವೇದ ಸಮ್ಮೇಳನ ಹಲವು ದಾಖಲೆಗಳಿಗೆ ಸಾಕ್ಷಿ: ಡಾ.ಗಿರಿಧರ ಕಜೆ