ಜಲಮೂಲಗಳ ಮೇಲೆ ನಿಗಾಕ್ಕೆ ಡಿಜಿಟಲ್‌ ವಾಟರ್‌ ಸ್ಟಾಕ್‌ ಯೋಜನೆ: ಸಚಿವ ಬೋಸರಾಜು

Published : Aug 29, 2025, 01:11 AM IST
NS Boseraju

ಸಾರಾಂಶ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ‘ಡಿಜಿಟಲ್‌ ವಾಟರ್‌ ಸ್ಟಾಕ್‌’ ಎಂಬ ನೂತನ ತಂತ್ರಜ್ಞಾನ ಆಧಾರಿತ ನೀರಿನ ನಿರ್ವಹಣಾ ವೇದಿಕೆ ಅನುಷ್ಠಾನಗೊಳಿಸುತ್ತಿದೆ.

ಬೆಂಗಳೂರು (ಆ.29): ರಾಜ್ಯದ ಜಲಮೂಲಗಳ ಸಮಗ್ರ ನಿರ್ವಹಣೆ ಮತ್ತು ಪಾರದರ್ಶಕತೆ, ಹೊಣೆಗಾರಿಕೆ ತರಲು ಉಪಗ್ರಹ ದತ್ತಾಂಶ ಹಾಗೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಡಿಜಿಟಲ್‌ ವಾಟರ್‌ ಸ್ಟಾಕ್‌ ಯೋಜನೆ ಅಳವಡಿಸಲು ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌. ಬೋಸರಾಜು ತಿಳಿಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ‘ಡಿಜಿಟಲ್‌ ವಾಟರ್‌ ಸ್ಟಾಕ್‌’ ಎಂಬ ನೂತನ ತಂತ್ರಜ್ಞಾನ ಆಧಾರಿತ ನೀರಿನ ನಿರ್ವಹಣಾ ವೇದಿಕೆ ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಕೆರೆ ಸಂರಕ್ಷಣಾ ಮತ್ತು ಅಭಿವೃದ್ಧಿ ಪ್ರಾಧಿಕಾರ ಈ ಯೋಜನೆ ಅನುಷ್ಠಾನಗೊಳಿಸುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪಗ್ರಹದ ಸೆನ್ಸಾರ್‌, ಇಮೇಜಿಂಗ್‌ ಹಾಗೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ಮೂಲಕ ಸರೋವರ, ಕೆರೆ ಮತ್ತು ಅಂತರ್ಜಲಗಳ ಸಮಗ್ರ ನಿರ್ವಹಣೆ ಮಾಡಲಾಗುತ್ತದೆ. 34,000ಕ್ಕೂ ಹೆಚ್ಚಿನ ಕೆರೆಗಳ ಸಮೀಕ್ಷೆ ಮಾಡಲಾಗಿದೆ ಮತ್ತು 31 ಸಾವಿರಕ್ಕೂ ಹೆಚ್ಚಿನ ಜಲಮೂಲಗಳನ್ನು ಜಿಯೋಟ್ಯಾಗ್‌ ಮಾಡಲಾಗಿದೆ. ಸಮೀಕ್ಷೆಯಲ್ಲಿ 42 ಸಾವಿರ ಎಕರೆಗೂ ಹೆಚ್ಚಿನ ಅತಿಕ್ರಮಣ ಗುರುತಿಸಲಾಗಿದ್ದು, 29 ಸಾವಿರಕ್ಕೂ ಹೆಚ್ಚಿನ ಅತಿಕ್ರಮಣ ತೆರವು ಮಾಡಲಾಗಿದೆ. ಮೊದಲ ಹಂತದಲ್ಲಿ ಅಂತರ್ಜಲದ ಅತಿಯಾದ ಬಳಕೆ ಮಾಡುತ್ತಿರುವ 41 ತಾಲೂಕುಗಳಲ್ಲಿ ಡಿಜಿಟಲ್‌ ವಾಟರ್‌ ಸ್ಟಾಕ್‌ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಏನಿದು ಡಿಜಿಟಲ್‌ ವಾಟರ್‌ ಸ್ಟಾಕ್‌?: ಉಪಗ್ರಹಗಳ ಸೆನ್ಸಾರ್‌ಗಳಿಂದ ಪಡೆದ ದತ್ತಾಂಶಗಳು, ಕೃತಕ ಬುದ್ಧಿಮತ್ತೆ ಮತ್ತು ಮಷಿನ್‌ ಲರ್ನಿಂಗ್‌ನಿಂದ ಪಡೆಯುವ ಇಮೇಜಿಂಗ್‌ನ ವಿಶ್ಲೇಷಣೆ ಮಾಡುವುದಕ್ಕೆ ಡಿಜಿಟಲ್‌ ವಾಟರ್‌ ಸ್ಟಾಕ್‌ ಎಂದು ಕರೆಯಲಾಗುತ್ತದೆ. ಜಲಮೂಲಗಳ ಐದು ವರ್ಷಗಳ ಹಿಂದಿನ ದತ್ತಾಂಶಗಳನ್ನು ಪಡೆದು, ಪ್ರಸ್ತುತ ಇರುವ ಸ್ಥಿತಿ-ಗತಿಗಳ ಹೋಲಿಕೆ ಮಾಡಲಾಗುತ್ತದೆ. ಯಾವುದೇ ಜಲಮೂಲದ ಸ್ವರೂಪ, ನೀರಿನ ಶೇಖರಣೆಯಲ್ಲಾಗುತ್ತಿರುವ ವ್ಯತ್ಯಾಸ ಗುರುತಿಸಿ ಅದನ್ನು ಸರಿಪಡಿಸುವ ಕಾರ್ಯ ಮಾಡಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!