
ಬೆಂಗಳೂರು : ವಿವಾದಕ್ಕೆ ಒಳಗಾಗಿರುವ ಆ್ಯಂಬಿಡೆಂಟ್ ಕಂಪೆನಿಯ ಮಾಲೀಕರ ಜತೆ ಯಾವುದೇ ಸಂಬಂಧ ಹೊಂದಿಲ್ಲ ಮತ್ತು ಅವರ ವೈಯಕ್ತಿಕ ಪರಿ ಚಯವೂ ತಮಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆ್ಯಂಬಿಡೆಂಟ್ ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಂಡಿದ್ದ ದಿನೇಶ್ ಗುಂಡೂರಾವ್ ಹಾಗೂ ರಾಮಲಿಂಗಾರೆಡ್ಡಿ ಫೋಟೋಗಳು ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಆ್ಯಂಬಿಡೆಂಟ್ ಸಂಸ್ಥೆಯ ಮಾಲೀಕರೊಂದಿಗೂ ನನಗೂ ಯಾವುದೇ ವೈಯಕ್ತಿಕ ಸಂಬಂಧ ಇಲ್ಲ. ನನಗೆ ಸಂಸ್ಥೆಯ ಮಾಲೀಕರ ಪರಿಚಯವೂ ಇಲ್ಲ.
ಅವರೊಂದಿಗೆ ಯಾವುದೇ ವ್ಯವಹಾರವನ್ನು ನಾನು ಮಾಡಿಲ್ಲ. ಹಲವರು ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಾರೆ. ಅದೇ ರೀತಿ ಆ್ಯಂಬಿಡೆಂಟ್ ಕಂಪೆನಿಯವರು ಮೊಬೈಲ್ ಬಿಡುಗಡೆ ಕಾರ್ಯಕ್ರಮಕ್ಕೆ ಕರೆದಿದ್ದರು. ಹೀಗಾಗಿ ಹೋಗಿದ್ದೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ನನಗೂ ಕಂಪೆನಿಗೂ ಸಂಬಂಧ ವಿಲ್ಲ- ರೆಡ್ಡಿ: ಇನ್ನು ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಆ್ಯಂಬಿಡೆಂಟ್ ಸಂಸ್ಥೆಯು ನನ್ನನ್ನು ಒಂದು ನೂತನ ಮೊಬೈಲ್ ಬಿಡುಗಡೆ ಕಾರ್ಯ ಕ್ರಮಕ್ಕೆ ಆಹ್ವಾನಿಸಿತ್ತು.
ಬೆಂಗಳೂರು ಸಚಿವನಾಗಿ ನಾನು ಆ ಕಾರ್ಯ ಕ್ರಮಕ್ಕೆ ಹೋಗಿದ್ದೇನೆ. ಅಷ್ಟೇ ಹೊರತು ನನಗೂ ಆ ಸಂಸ್ಥೆಗೂ ಯಾವುದೇ ರೀತಿಯ ಸಂಬಂಧ ವಿಲ್ಲ. ಸಂಸ್ಥೆಯ ಮಾಲೀಕರಿಗೆ ನನಗೂ ಯಾವುದೇ ವೈಯಕ್ತಿಕ ಪರಿಚಯ ಇಲ್ಲ. ಸಚಿವನಾಗಿದ್ದಾಗ ಹಲವಾರು ಕರ್ಯಕ್ರಮಗಳಿಗೆ ನನಗೆ ಆಹ್ವಾನ ಬಂದಿರು ತ್ತದೆ. ಅದೇ ರೀತಿ ಈ ಸಂಸ್ಥೆಯಿಂದ ಕೂಡ ಆಹ್ವಾನ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ