ಹಳೆ ಪಿಂಚಣಿ ಮರುಜಾರಿಗೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

Published : Jun 14, 2023, 05:14 AM IST
ಹಳೆ ಪಿಂಚಣಿ ಮರುಜಾರಿಗೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಸಂಬಂಧ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು. ನಿಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಅದೇ ರೀತಿ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜೂ.14): ಹಾಲಿ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು (ಒಪಿಎಸ್‌) ಮರು ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್‌ಪಿಎಸ್‌ ರದ್ದುಗೊಳಿಸುವಂತೆ ಕೋರಿ ಸೋಮವಾರವಷ್ಟೆ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘ ಹಾಗೂ ಇನ್ನಿತರೆ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಮಂಗಳವಾರ ಮುಖ್ಯಮಂತ್ರಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಮಾಡಿತು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಅವರು, ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಸಂಬಂಧ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು. ನಿಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಅದೇ ರೀತಿ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಹಳೆ ಪಿಂಚಣಿ ಯೋಜನೆ ಜಾರಿ: ಚರ್ಚೆಗೆ ಸರ್ಕಾರ ಒಪ್ಪಿಗೆ

ಇದಕ್ಕೂ ಮುನ್ನ ಕರ್ನಾಟಕ ರಾಜ್ಯ ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ ಅವರು ಎನ್‌ಪಿಎಸ್‌ನಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಅವರಿಗೆ ವಿವರಿಸಿದರು. 2.98 ಲಕ್ಷ ನೌಕರರು ಎನ್‌ಪಿಎಸ್‌ ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಎನ್‌ಎಸ್‌ಡಿಎಲ್‌ನಲ್ಲಿ ಠೇವಣಿ ಇಡಲಾಗಿದೆ. ಈ ಮೊತ್ತ ಬಳಕೆ ಮಾಡಿ ಅವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿಪಿಎಫ್‌ನಲ್ಲಿ ಇಡಬಹುದು. ರಾಜಸ್ಥಾನ, ಛತ್ತೀಸ್‌ಗಢÜದಲ್ಲಿ ಎನ್‌ಪಿಎಸ್‌ ರದ್ದಾಗಿದ್ದು, ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಎನ್‌ಪಿಎಸ್‌ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19 ಸಾವಿರ ಕೋಟಿ ರು. ಹಣದಲ್ಲಿ ನೌಕರರ ಪಾಲಿನ 9 ಸಾವಿರ ಕೋಟಿ ರು. ಹಣವನ್ನು ಜಿಪಿಎಫ್‌ಗೆ ಪರಿವರ್ತನೆ ಮಾಡಿಕೊಳ್ಳಬಹುದು ಹಾಗೂ ಸರ್ಕಾರದ ಪಾಲಿನ 10 ಸಾವಿರ ಕೋಟಿ ರು.ಗಳನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ವಿವರಿಸಿದರು.

ಈ ವೇಳೆ ವಿಧಾನ ಪರಿಷತ್‌ ಮಾಜಿ ಸದಸ್ಯ ವಿ.ಎಸ್‌.ಉಗ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆಪಿಟಿಸಿಎಲ…, ಆರೋಗ್ಯ, ಜಲಮಂಡಳಿ, ಕಂದಾಯ ಇಲಾಖೆ ನೌಕರರ ಸಂಘ ಸೇರಿದಂತೆ ಹಲವು ಸಂಘಟನೆಗಳ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!