ಬಜೆಟ್ ಮಂಡನೆಗೂ ಮುನ್ನ ಅತೃಪ್ತರ ರಾಜೀನಾಮೆ ?

Published : Feb 08, 2019, 08:39 AM ISTUpdated : Feb 08, 2019, 08:47 AM IST
ಬಜೆಟ್ ಮಂಡನೆಗೂ ಮುನ್ನ ಅತೃಪ್ತರ ರಾಜೀನಾಮೆ ?

ಸಾರಾಂಶ

ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಮುಖ್ಯಮಂತ್ರಿಗಳ ಬಜೆಟ್ ಮಂಡನೆಗೂ ಮೊದಲು ಪತ್ರಿಕಾಗೋಷ್ಠಿ ಕರೆದಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರು :  ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಮುಖ್ಯಮಂತ್ರಿಗಳ ಬಜೆಟ್ ಮಂಡನೆಗೂ ಮೊದಲು ಪತ್ರಿಕಾಗೋಷ್ಠಿ ಕರೆದಿರುವುದು ಕುತೂಹಲ ಮೂಡಿಸಿದೆ.

ಬೆಳಗ್ಗೆ 11ಗಂಟೆಗೆ ವಿಧಾನಸೌಧ ದಲ್ಲಿನ ತಮ್ಮ ಕೊಠಡಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು, ಇದಕ್ಕೂ ಮೊದಲೇ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಅತೃಪ್ತ ಶಾಸಕರು ರಾಜೀನಾಮೆ ನೀಡಬಹುದು. ಈ ಬಗ್ಗೆ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಬಹುದು ಎಂಬ ಮಾತು
ಕೇಳಿಬಂದಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃ ತ್ವದ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ ಎಂದು ಗುರುವಾರವೂ ಬಲವಾಗಿ ಹೇಳಿರುವ ಯಡಿಯೂರಪ್ಪ ಅವರು ಇದನ್ನು ಶುಕ್ರವಾರ ನಿರೂಪಿಸಲು ಪ್ರಯತ್ನಿಸಲಿ ದ್ದಾರೆ. ಅದಕ್ಕೂ ಮೊದಲು ಗುರುವಾರ ತಡರಾತ್ರಿ ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾದ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಅಂದರೆ, ಸರ್ಕಾರಕ್ಕೆ ಬಹುಮತವಿಲ್ಲ ಎಂಬುದನ್ನು ಪ್ರತಿಪಾದಿಸುವ ಸಂಬಂಧ ಅತೃಪ್ತ ಶಾಸಕರ ರಾಜೀ ನಾಮೆಯನ್ನೇ ಮುಂದಿಟ್ಟುಕೊಂಡು ಹೋರಾಟ ನಡೆಸುವ ಬಗ್ಗೆಯೂ ಯಡಿಯೂರಪ್ಪ ಅವರು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!