ದೀಪಾವಳಿ ಪಟಾಕಿ ಸಿಡಿಸಲು ಮುಂಜಾಗ್ರತಾ ಕ್ರಮಗಳು: ಅವಘಡಕ್ಕೆ ಸಹಾಯವಾಣಿ ಆರಂಭಿಸಿದ ಸರ್ಕಾರ

Published : Nov 12, 2023, 12:49 PM IST
ದೀಪಾವಳಿ ಪಟಾಕಿ ಸಿಡಿಸಲು ಮುಂಜಾಗ್ರತಾ ಕ್ರಮಗಳು: ಅವಘಡಕ್ಕೆ ಸಹಾಯವಾಣಿ ಆರಂಭಿಸಿದ ಸರ್ಕಾರ

ಸಾರಾಂಶ

ಪಟಾಕಿ ಅವಘಡಗಳಿಗೆ ಬೆಂಗಳೂರು ನಗರ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗಾಗಿ ಸರ್ಕಾರದಿಂದ ಸಹಾಯವಾಣಿ 9481740137 ಹಾಗೂ 080-26707176  ಆರಂಭಿಸಿದೆ.

ಬೆಂಗಳೂರು (ನ.12): ದೀಪಾವಳಿ ಅಂಗವಾಗಿ ಪಟಾಕಿ ಸಿಡಿಸುವ ವೇಳೆ ಸಂಭವಿಸುವ ಅವಘಡಗಳಿಗೆ ಚಿಕಿತ್ಸೆ ನೀಡಲು ಬೆಂಗಳೂರು ನಗರ ಆಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಸರ್ಕಾರದಿಂದ ಸಹಾಯವಾಣಿ 9481740137 ಹಾಗೂ 080-26707176  ಆರಂಭಿಸಿದೆ. ಜೊತೆಗೆ, ಪಟಾಕಿ ಸಿಡಿಸುವಾಗ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ನಾಡಿನೆಲ್ಲೆಡೆ ಕಳೆಗಟ್ಟಿದ ದೀಪಾವಳಿ ಹಬ್ಬ ಸಂಭ್ರಮ ಮನೆ ಮಾಡಿದೆ. ದೀಪಾವಳಿ ಹಬ್ಬದ ವೇಳೆ ಪಟಾಕಿ ಅವಘಡಗಳು ಸಂಭವಿಸುವ ಸಾಧ್ಯತೆಯಿದೆ. ಬೆಂಗಳೂರಿನ ಕಣ್ಞಿನ ಆಸ್ಪತ್ರೆಗಳು ಪಟಾಕಿ ಅವಘಡ ಚಿಕಿತ್ಸೆಗೆಂದು ವಿಶೇಷ ಹಾಸಿಗೆ ಮೀಸಲಿಟ್ಟಿವೆ. ಬೆಂಗಳೂರಿನ ಮಿಂಟೋ, ನಾರಾಯಣ ನೇತ್ರಾಲಯ ಸೇರಿದಂತೆ ಇತರೆ ಆಸ್ಪತ್ರೆ ಗಳು ಸಜ್ಜುಗೊಂಡವೆ. ಪಟಾಕಿ ಅವಘಡಗಳಿಂದ ಸಂಭವಿಸುವ ಕಣ್ಣಿನ ಹಾನಿ ತಪ್ಪಿಸಲು ಗಾಯಾಳುಗಳಿಗೆ ಚಿಕಿತ್ಸೆಗೆ ಅಗತ್ಯ ಸಿದ್ದತೆ ಮಾಡಿಕೊಂಡಿವೆ.

ದೀಪಾವಳಿಗೆ 24x7 ಕಣ್ಣಿನ ಚಿಕಿತ್ಸೆ, ಸಹಾಯವಾಣಿ ಆರಂಭಿಸಿದ ಮಿಂಟೋ ಆಸ್ಪತ್ರೆ: ಈಗ್ಲೇ ನೋಟ್‌ ಮಾಡ್ಕೊಳಿ!

ಹಬ್ಬದ ಹಿನ್ನೆಲೆ ಮಿಂಟೋ ಸೇರಿ ಇತರೆ ಆಸ್ಪತ್ರೆ ಗಳು ದಿನ 24 ಗಂಟೆಯೂ ಸೇವೆ ‌ನೀಡಲು ಸಜ್ಜುಗೊಳಿಸಲಾಗಿದೆ. ಪಟಾಕಿ ಅವಘಡ ಚಿಕಿತ್ಸೆಗೆಂದು ಮಿಂಟೋ ಆಸ್ಪತ್ರೆಯು 35 ಹಾಸಿಗೆ ಮೀಸಲಿಟ್ಟಿದೆ. ಇತರೆ ಗಾಯಗಳಿಗೆ ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ 54 ವಿಶೇಷ ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಸಿಬ್ಬಂದಿಗಳು ದಿನಪೂರ್ತಿ ಸೇವೆ ನೀಡಲು ಸಜ್ಜುಗೊಂಡಿವೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕಣ್ಣಿನ ಆಸ್ಪತ್ರೆಗಳು ಸಹಾಯವಾಣಿಯನ್ನು ಆರಂಭಿಸಿವೆ. 

ಪಟಾಕಿ ಸಿಡಿಸುವ ವೇಳೆ ವೈದ್ಯರ ಸಲಹೆ:
- ಕನಿಷ್ಠ 2-3 ಅಡಿ ದೂರದಿಂದ ಪಟಾಕಿ ಹಚ್ಚಬೇಕು.
- ಪಟಾಕಿ ಹಚ್ಚಲು ಉದ್ದನೆಯ ಕೋಲು ಬಳಸಬೇಕು.
- ಪಟಾಕಿ ಖರೀದಿಸಲೇ ಬೇಕಾದಲ್ಲಿ ಐಎಸ್‌ಐ ಗುರುತಿನ ಹಸಿರು ಪಟಾಕಿಗಳನ್ನು ಖರೀದಿಸಬೇಕು.
- ಮೈದಾನ, ಖಾಲಿ ಜಾಗಗಳಲ್ಲಷ್ಟೆ ಪಟಾಕಿ ಹಚ್ಚಬೇಕು.
- ಮಕ್ಕಳು ಒಂಟಿಯಾಗಿ ಪಟಾಕಿ ಸಿಡಿಸುವುದಕ್ಕೆ ಅವಕಾಶ ನೀಡಬೇಡಿ. ಜತೆಯಲ್ಲಿ ಪಾಲಕರು ಇರಲಿ.
- ಪಟಾಕಿ ಸಿಡಿದಾಗ ಯಾವುದಾದರೂ ಕಿಡಿ ನಿಮ್ಮ ಕಣ್ಣನ್ನು ಸೇರಿದರೆ ಕಣ್ಣನ್ನು ಉಜ್ಜಿಕೊಳ್ಳಬೇಡಿ.
- ಅರೆಬರೆ ಸುಟ್ಟ ಪಟಾಕಿ ತುಣುಕನ್ನು ಮುಟ್ಟುವ, ಗಾಳಿಯಲ್ಲಿ ಎಸೆಯುವ ಪ್ರಯತ್ನ ಬೇಡ.
- ಗಾಜು, ಡಬ್ಬ ಇತರೆ ಪಾತ್ರೆಗಳನ್ನು ಇರಿಸಿ ಪಟಾಕಿ, ರಾಕೆಟ್‌ ಹಚ್ಚುವ ಸಾಹಸ ಮಾಡಬೇಡಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!