ಕಿಡಿಗೇಡಿಗಳಿಗೆ ಅಪರಿಚಿತನಿಂದ ಹಣ ಹಂಚಿಕೆ? ದೃಶ್ಯ ಸಿಸಿಟಿವಿಯಲ್ಲಿ ಸೆರೆ

Kannadaprabha News   | Asianet News
Published : Aug 13, 2020, 08:05 AM IST
ಕಿಡಿಗೇಡಿಗಳಿಗೆ ಅಪರಿಚಿತನಿಂದ ಹಣ ಹಂಚಿಕೆ? ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಾರಾಂಶ

ಪೂರ್ವಯೋಜಿತ ಕೃತ್ಯ ಆರೋಪಕ್ಕೆ ಪುಷ್ಟಿ| ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದ ದುಷ್ಕರ್ಮಿಗಳಿಬ್ಬರು| ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದ ಇಬ್ಬರು ಯುವಕರಿಗೆ ಹಣ ಕೊಡಲು ಮುಂದಾಗಿದ್ದ ಆರೋಪಿ| 

ಬೆಂಗಳೂರು(ಆ.13):  ಕಿಡಿಗೇಡಿಗಳು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತನೊಬ್ಬ ಹಣ ಕೊಟ್ಟಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ದುಷ್ಕರ್ಮಿಗಳಿಬ್ಬರು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಡಿಯೋ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದ ಇಬ್ಬರು ಯುವಕರಿಗೆ ಹಣ ಕೊಡಲು ಮುಂದಾಗಿದ್ದಾನೆ. ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಬಂದ ಆತನ ಬಳಿ ಎರಡು ಕಂತೆಯ ಹಣ ಪಡೆದುಕೊಂಡಿದ್ದಾರೆ. ಬಳಿಕ ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಪೈಗಂಬರ್ ಅವಹೇಳನ ಆರೋಪ: ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆ ಪೂರ್ವ ನಿಯೋಜಿತ ಕೃತ್ಯ?

ಈ ಹಣ ಪಡೆಯುವ ವಿಡಿಯೋ ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನು ನೋಡಿದರೆ ಕೃತ್ಯ ನಿಜಕ್ಕೂ ಮೊದಲೇ ಪೂರ್ವ ನಿಯೋಜಿತ ಎಂಬಂತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ದ್ವಿಚಕ್ರ ವಾಹನ ಸಂಖ್ಯೆ ಅಸ್ಪಷ್ಟವಾಗಿದೆ. ಆರೋಪಿಯನ್ನು ಪತ್ತೆ ಹಚ್ಚಿ, ಬಂಧಿಸಲಾಗುವುದು. ವಿಚಾರಣೆ ಬಳಿಕ ಯಾವ ಉದ್ದೇಶಕ್ಕೆ ಹಣ ನೀಡಿದ ಎಂಬುದು ತಿಳಿಯಲಿದೆ ಎಂದು ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

92 ಲಕ್ಷ ವೇತನ ಝೀರೋ ಭದ್ರತೆ, ಒಂದೇ ದಿನದಲ್ಲಿ ಶೇ.40ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ಬೆಂಗಳೂರು ಐಟಿ ಕಂಪೆನಿ!
​KERC new power rates: ಬೇಸಿಗೆ ಆರಂಭದಲ್ಲೇ ಕರೆಂಟ್ ಶಾಕ್: ಯಾರಿಗೆ ವರ, ಯಾರಿಗೆ ಹೊರೆ? ಕೃಷಿ ಪಂಪ್‌ಸೆಟ್‌ಗಳಿಗೂ ದರ ಏರಿಕೆ ಬಿಸಿ?