
ಮಂಡ್ಯ(ನ.29) ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಜೊತೆಗಿನ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿ ಇದೀಗ ಟೆಂಪಲ್ ರನ್ ಆರಂಭಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ವರಾಹನಾಥ ಕಲ್ಲಹಳ್ಳಿಯಲ್ಲಿರುವ ಐತಿಹಾಸಿಕ ಭೂವರಾಹನಾಥ ದೇವಸ್ಥಾನಕ್ಕೆ ಡಿಸಿಎಂ ಕೆಲವೇ ಕ್ಷಣಗಳಲ್ಲಿ ಆಗಮಿಸಲಿದ್ದಾರೆ. ಅವರ ಆಗಮನಕ್ಕೂ ಮುನ್ನವೇ ದೇವಸ್ಥಾನದ ಆವರಣದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ಮೃತ್ಯುಂಜಯ ಹೋಮಕ್ಕೆ ಸಿದ್ಧತೆ ಮಾಡಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿ ಬಳಿಕ ಡಿಕೆಶಿ ಅವರು ಹೋಮದಲ್ಲಿ ಭಾಗಿಯಾಗಲಿದ್ದಾರೆ.
ಡಿಸಿಎಂ ಅವರನ್ನು ಸ್ವಾಗತಿಸಲು ಸ್ಥಳೀಯ ಕಾಂಗ್ರೆಸ್ ಮುಖಂಡರು ಈಗಾಗಲೇ ದೇಗುಲದ ಬಳಿ ಆಗಮಿಸಿ ಸಿದ್ಧತೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ನಡುವೆ, ಡಿಕೆಶಿ ಆಗಮನಕ್ಕೂ ಮುನ್ನವೇ ದೇಗುಲದ ಆವರಣದಲ್ಲಿ ಹೆಜ್ಜೇನುಗಳ ದಾಳಿ ಸಂಭವಿಸಿದ್ದು, ಏಕಾಏಕಿ ಒಂದಿಬ್ಬರು ಭಕ್ತರ ಮೇಲೆ ಜೇನುಗಳು ದಾಳಿ ಮಾಡಿವೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಸ್ಥಳದಲ್ಲಿದ್ದ ಭಕ್ತರು ಕೆಲ ಕಾಲ ಆತಂಕಗೊಂಡಿದ್ದರು. ಈ ಆತಂಕದ ಮಧ್ಯೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇವರ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ