
ದೆಹಲಿ (ಜೂ.02) ಕರ್ನಾಟಕ ಹೊಸ ಸಂಪುಟದಲ್ಲಿ ಯಾರು ಸಚಿವರಾಗಿ ಮುಂದುವರಿಯುತ್ತಾರೆ, ಯಾರಿಗೆ ಕೊಕ್? ನೀಡಲಾಗುತ್ತದೆ ಅನ್ನೋ ಕುರಿತು ಚರ್ಚೆ ನಡೆಯುತ್ತಿದೆ. ನಾಳೆ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಬಳಿಕ ಶಾಸಕಾಂಗ ಪಕ್ಷದಲ್ಲಿ ಡಿಕೆ ಶಿವಕುಮಾರ್ ನಾಯಕನಾಗಿ ಆಯ್ಕೆಯಾಗಿದ್ದರು. ಇದೀಗ ಡಿಕೆ ಶಿವಕುಮಾರ್ ಸಂಪುಟದಲ್ಲಿ ಯಾರೆಗೆಲ್ಲಾ ಮಂತ್ರಿಭಾಗ್ಯ ಅನ್ನೋ ಚರ್ಚೆ ಅಂತಿಮ ಘಟ್ಟ ತಲುಪಿದೆ. ದೆಹಲಿಯಲ್ಲಿ ಇದೀಗ ಮತ್ತೊಂದು ಸುತ್ತಿನ ಮೀಟಿಂಗ್ ಆರಂಭಗೊಂಡಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಮೀಟಿಂಗ್ ನಡೆಸುತ್ತಿದೆ.
ಈ ಮಹತ್ವದ ಮೀಟಿಂಗ್ನಲ್ಲಿ ಡಾ.ಜಿ ಪರಮೇಶ್ವರ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಭಾರಿ ಚರ್ಚೆಯಾಗುತ್ತಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಗೃಹ ಖಾತೆ ನಿಭಾಯಿಸಿದ ಪರಮೇಶ್ವರ್ಗೆ ಖಾತೆ ಬದಲಾಯಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಸಂಪುಟ ಚರ್ಚೆಯಲ್ಲಿ ಸಿದ್ದರಾಮಯ್ಯ ಕೆಲ ಸೂಚನೆ ನೀಡಿದ್ದಾರೆ. 14 ಮಂದಿ ಸೇರ್ಪಡೆಯಾಗಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ 9 ಮಂದಿಗೆ ಮಾತ್ರ ಅವಕಾಶ ಎಂದು ಡಿಕೆ ಶಿವಕುಮಾರ್ ವಾದ ಮಂಡಿಸಿದ್ದಾರೆ. ಹೀಗಾಗಿ ಚರ್ಚೆ ಇದೀಗ ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿದೆ.
ಡಿಕೆ ಶಿವಕುಮಾರ್ ಸಂಪುಟ ಸೇರ್ಪಡೆ ಕುರಿತು ಚರ್ಚೆಯಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ 5 ಹೊಸ ಮುಖಗಳಿಗೆ ಅವಕಾಶ ನೀಡಲು ಸೂಚಿಸಿದ್ದಾರೆ. ಇತ್ತ 14+1 ಆಯ್ಕೆಯಲ್ಲಿ 5 ಹೊಸಬರು ಇರಬೇಕು ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಪಟ್ಟು ಹಿಡಿದಂತೆ 14 ಮಂದಿ ಮೊದಲ ಹಂತದಲ್ಲಿ ಸಂಪುಟ ಸೇರುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ