ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ದೇವರಗುಡ್ಡದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ!

Published : Nov 23, 2025, 12:51 PM IST
DK Shivakumar Fans Perform Special Pooja at Devaragudda for CM Post

ಸಾರಾಂಶ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಹಾರೈಸಿ, ಹಾವೇರಿ ಜಿಲ್ಲೆಯ ದೇವರಗುಡ್ಡದ ಮಾಲತೇಶ ದೇವಸ್ಥಾನದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ, ಅಭಿಮಾನಿಯೊಬ್ಬರು ಗೊರವಯ್ಯನ ವೇಷ ಧರಿಸಿ ಛಾಟಿ ಸೇವೆ ನೆರವೇರಿಸಿದ್ದು ವಿಶೇಷವಾಗಿತ್ತು.

ಹಾವೇರಿ (ನ.23): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಆಶಿಸಿ, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡದ ಮಾಲತೇಶ ದೇವಸ್ಥಾನದಲ್ಲಿ ಇಂದು (ಭಾನುವಾರ) ಅವರ ಅಭಿಮಾನಿಗಳು ವಿಶೇಷ ಪೂಜೆ ಮತ್ತು ವಿಶಿಷ್ಟ ಸೇವಾ ಕಾರ್ಯಕ್ರಮವನ್ನು ನೆರವೇರಿಸಿದರು. ಬಸಾಪುರ ಗ್ರಾಮದ ಮಣಿಕಂಠ ಬಳ್ಳಾರಿ ಅವರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗೊರವಯ್ಯನ ವೇಷ ಧರಿಸಿ ಛಾಟಿ ಸೇವೆ:

ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿಯೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂಬ ಹಾರೈಕೆಯೊಂದಿಗೆ ಅಭಿಮಾನಿಯೊಬ್ಬರು ಸಾಂಪ್ರದಾಯಿಕ ಗೊರವಯ್ಯನ ವೇಷ ಧರಿಸಿ ಛಾಟಿ ಸೇವೆಯನ್ನೂ ಸಲ್ಲಿಸಿದ್ದು ಗಮನ ಸೆಳೆಯಿತು. 

ನಾಗರಾಜ ನಾಯರ್, ಕರಿಯಲ್ಲಪ್ಪ ಕೇಸರಹಳ್ಳಿ, ಮಲ್ಲಪ್ಪ ಮುದ್ದಿ, ಸುರೇಶ ದೊಡ್ಡಮನಿ, ನೇತ್ರಾವತಿ ಬಳ್ಳಾರಿ, ಪರಮೇಶ ನಾಯರ್, ಮೈಲಪ್ಪ ಉರ್ಮಿ, ಬಸವರಾಜ ಹುಲ್ಲೂರ, ಮಲ್ಲಪ್ಪ ಕಂಬಳಿ ಮತ್ತು ಹನಮಂತ ಕೇಸರಳ್ಳಿ, ಬೀರಪ್ಪ ದೊಡ್ಡ ಕುರುಬರ ಸೇರಿದಂತೆ ಹಲವು ಅಭಿಮಾನಿಗಳು ಈ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ದೇವರಗುಡ್ಡದ ಮಾಲತೇಶನ ಆಶೀರ್ವಾದ ಸದಾ ಡಿಕೆ ಶಿವಕುಮಾರ್ ಅವರ ಮೇಲಿರಲಿ ಎಂದು ಎಲ್ಲರೂ ಪ್ರಾರ್ಥಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ