
ಬೆಂಗಳೂರು/ನವದೆಹಲಿ, [ಅ.15]: ಇಡಿ ಸಮನ್ಸ್ ರದ್ದು ಕೋರಿ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರು ದೆಹಲಿ ಹೈಕೋರ್ಟ್ ಮೊರೆಹೋಗಿದ್ದಾರೆ.
ಕೋಟ್ಯಂತರ ರು. ಹಣಕಾಸಿನ ವ್ಯವಹಾರ ನಡೆಸಿದ ಡಿಕೆಶಿ ತಾಯಿ ಗೌರಮ್ಮ!
ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಗೌರಮ್ಮ ಮತ್ತು ಉಷಾಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಅದರಂತೆ ಗೌರಮ್ಮ ಇಂದು [ಮಂಗಳವಾರ] ದೆಹಲಿಯ ಇಡಿ ಕಚೇರಿಗೆ ಹಾಜರಾಗಬೇಕಿತ್ತು. ಆದ್ರೆ ಅನಾರೋಗ್ಯ ಕಾರಣ ನೀಡಿ ವಿಚಾರಣೆಗೆ ಗೈರಾಗಿದ್ದಾರೆ.
ಡಿಕೆ ಶಿವಕುಮಾರ್ ಪತ್ನಿ, ತಾಯಿಗೂ ಇಡಿ ಬುಲಾವ್..!
ಇನ್ನು ಉಷಾ ಅವರಿಗೆ ಅ.17ರಂದು ವಿಚಾರಣೆಗೆ ಬರುವಂತೆ ಇಡಿ ಸಮನ್ಸ್ ನೀಡಿದೆ. ಇದೀಗ ಈ ಸಮನ್ಸ್ ರದ್ದು ಕೋರಿ ಗೌರಮ್ಮ ಹಾಗೂ ಉಷಾ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ನಾಳೆ [ಬುಧವಾರ] ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ.
ವಿಚಾರಣೆಯಿಂದ ಬಚಾವಾಗಲು ಈ ತಂತ್ರ ರೂಪಿಸಿದ್ದು, ಕೋರ್ಟ್ ಏನು ಹೇಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ. ಇದೇ ರೀತಿ ಇಡಿ ಅಧಿಕಾರಿಗಳು ಡಿಕೆಶಿಗೆ ಸಮನ್ಸ್ ನೀಡಿದ್ದರು.ಅದನ್ನು ರದ್ದು ಕೋರಿ ಡಿಕೆಶಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ ಕೋರ್ಟ್ ಡಿಕೆಶಿ ಅರ್ಜಿಯನ್ನು ವಜಾ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ