ಲಾಕ್‌ಡೌನ್‌ನಿಂದಾಗಿ ಜನ ತತ್ತರಿಸಿದ್ದಾರೆ : ಮತ್ತೆ ಆಗುತ್ತಾ..?

Kannadaprabha News   | Asianet News
Published : Apr 15, 2021, 07:21 AM IST
ಲಾಕ್‌ಡೌನ್‌ನಿಂದಾಗಿ  ಜನ ತತ್ತರಿಸಿದ್ದಾರೆ :   ಮತ್ತೆ ಆಗುತ್ತಾ..?

ಸಾರಾಂಶ

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದೇ ವೇಳೆ  ಲಾಕ್‌ಡೌನ್‌ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದ್ದು, ಇದರ ಹೊರತಾದ ಪರ್ಯಾಯ ಕ್ರಮದ ಬಗ್ಗೆ ಮುಖಂಡರು ಸೂಚನೆ ನೀಡಿದ್ದಾರೆ. 

 ಬೆಂಗಳೂರು (ಏ.15): ‘ರಾಜ್ಯದಲ್ಲಿ ಲಾಕ್‌ಡೌನ್‌ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕೊರೋನಾ ತೀವ್ರ ಗತಿಯಲ್ಲಿ ಹರಡದಂತೆ ಮುನ್ನೆಚ್ಚರಿಕೆಗೆ ಯಾವ್ಯಾವ ಕ್ರಮ ಬೇಕೋ ಕೈಗೊಳ್ಳಲಿ. ಲಾಕ್‌ಡೌನ್‌ನಿಂದ ಯಾರಿಗೂ ಅನುಕೂಲ ಆಗುವುದಿಲ್ಲ. ಈ ಹಂತದಲ್ಲಿ ಜೀವನ ಹಾಗೂ ಜೀವನ ಎರಡೂ ಮುಖ್ಯ ಎಂಬುದು ಅರಿಯಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

‘ಇನ್ನು ಕೊರೊನಾ ವಿಚಾರವಾಗಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವುದು ಕೇವಲ ನನ್ನ ನಿರ್ಧಾರವಲ್ಲ. ಇದು ರಾಜ್ಯದ ವಿಚಾರ. ಈ ಬಗ್ಗೆ ನಮ್ಮ ನಾಯಕರ ಕುರಿತು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ’ ಎಂದೂ ಅವರು ತಿಳಿಸಿದ್ದಾರೆ.

KSRTC ಖಾಸಗೀಕರಣಕ್ಕೆ ಸರ್ಕಾರ ಸಂಚು: ಡಿಕೆಶಿ ..

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಲಾಕ್‌ಡೌನ್‌ ಅಗತ್ಯವಿಲ್ಲ. ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಅವರಿಗೆ ಆರ್ಥಿಕ ನೆರವನ್ನೂ ನೀಡುತ್ತಿಲ್ಲ. ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರು. ಪ್ಯಾಕೇಜ್‌ ಘೋಷಿಸಿತ್ತು. ರಾಜ್ಯ ಸರ್ಕಾರದಿಂದ 1600 ಕೋಟಿ ಪ್ಯಾಕೇಜ್… ಎಂದರು. ಆದರೆ, ಯಾರಿಗೂ ಸಹಾಯವಾಗಲಿಲ್ಲ. ಒಂದು ಕಡೆ ಜೀವ, ಮತ್ತೊಂದು ಕಡೆ ಜೀವನ. ಇವೆರಡರ ನಡುವೆ ಜನ ಸಿಲುಕಿದ್ದಾರೆ ಎಂಬುದನ್ನು ಅರಿಯಬೇಕು’ ಎಂದು ಮಾರ್ಮಿಕವಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ