ಡಿಕೆಶಿ ಆರೆಸ್ಸೆಸ್‌ ಗೀತೆ ಹಾಡಿದರೆ ಬಿಜೆಪಿ ಪರ ಅಂತಾ ಅಲ್ಲ: ತನ್ವೀರ್

Kannadaprabha News, Ravi Janekal |   | Kannada Prabha
Published : Aug 26, 2025, 05:21 AM IST
dk shivakumar

ಸಾರಾಂಶ

ಡಿಸಿಎಂ ಡಿಕೆಶಿ ಆರ್‌ಎಸ್‌ಎಸ್ ಗೀತೆ ಹಾಡಿರುವುದಕ್ಕೆ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಮಾಡಿರುವ ಟೀಕೆ ಸರಿಯಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. 

ಮೈಸೂರು (ಆ.26): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸದನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದರೆ ಅದರ ಅರ್ಥ ಅವರು ಬಿಜೆಪಿ ಪರ ಅಂತಾ ಅಲ್ಲ. ಡಿಸಿಎಂ ಬಗ್ಗೆ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಮಾಡಿರುವ ಟೀಕೆ ಸರಿ ಇಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. 

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆ ಪಕ್ಷದ ಸಿದ್ಧಾಂತ ಅರ್ಥ ಮಾಡಿಕೊಂಡರೆ ಅದರಲ್ಲಿ ತಪ್ಪೇನಿದೆ? ಯಾರು ಕೂಡ ತಮ್ಮ ಪಕ್ಷದ ಸಿದ್ಧಾಂತವನ್ನು ಬಲಿ ಕೊಡಲ್ಲ. ಡಿಕೆಶಿ ಬಗ್ಗೆ ರಾಜಣ್ಣ ಮಾಡಿರುವ ಟೀಕೆಯೂ ಸರಿ ಇಲ್ಲ. ರಾಜಣ್ಣ ಈ ರೀತಿ ಮಾತಾಡಿಯೇ ತಮಗೆ ತಾವೇ ನಷ್ಟ ಅನುಭವಿಸಿದ್ದಾರೆ ಎಂದರು.

ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಯಾರು ಮಾಡಬಾರದು. ಮುಸುಕುಧಾರಿಯ ಮಂಪರು ಪರೀಕ್ಷೆ ಅಗತ್ಯವಾಗಿ ಮಾಡಬೇಕು. ಧಾರ್ಮಿಕ ಸಂಸ್ಥೆ ಮೇಲೆ ಆರೋಪದ ಹಿಂದೆ ಯಾರದೋ ಕೈವಾಡವಿದೆ. ಆ ಸಮಾಜಘಾತಕ ಯಾರೇ ಆಗಿರಲಿ ಶಿಕ್ಷೆ ಆಗಬೇಕು ಎಂದು ಹೇಳಿದರು.

ಪ್ರತಾಪ್ ಸಿಂಹಗೆ ತಿರುಗೇಟು:

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ವಿರೋಧದ ಬಗ್ಗೆ ಮಾತನಾಡಿದ ತನ್ವೀರ್ ಸೇಠ್, ಯದುವಂಶದ ಮಹಾರಾಜರು ಪಟ್ಟದಲ್ಲಿ ಇಲ್ಲದಿದ್ದಾಗ ದಸರಾ ಮುನ್ನಡೆಸಿದ್ದು ಹೈದಾರಲಿ-ಟಿಪ್ಪು. ವ್ಯಕ್ತಿಯ ಸ್ಥಾನಮಾನ ಗುರುತಿಸಿ ದಸರಾ ಉದ್ಘಾಟನೆಗೆ ಕರೆಯುತ್ತೇವೆ. ತಾಯಿ ಚಾಮುಂಡಿಗೆ ಪೂಜೆ ಮಾಡಿಯೇ ದಸರಾ ಮಾಡುತ್ತೇವ. ಟೀಕೆ ಮಾಡುವವರಿಗೆ ತಾಳ್ಮೆ ಇರಲಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?