ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವಿವಾದ, ಡಿಕೆ ಶಿವಕುಮಾರ ಸ್ಫೋಟಕ ಹೇಳಿಕೆ!

Published : Sep 10, 2025, 11:14 AM IST
DK Shivakumar on maddur Ganesh

ಸಾರಾಂಶ

ಮದ್ದೂರು ಕಲ್ಲು ತೂರಾಟ ಪ್ರಕರಣದ ಬಗ್ಗೆ ಮಾಹಿತಿ ಇಲ್ಲದೆ ಮಾತನಾಡಲ್ಲ ಎಂದ ಡಿಕೆ ಶಿವಕುಮಾರ್. ಬಿಜೆಪಿ ನಾಯಕರ ಭೇಟಿಗೆ ಪ್ರತಿಕ್ರಿಯಿಸಿ, ಜನರನ್ನು ಒಡೆಯುವುದೇ ಅವರ ಕೆಲಸ ಎಂದು ವಾಗ್ದಾಳಿ ನಡೆಸಿದರು. ಸತೀಶ್ ಜೈಲ್ ಬಂಧನವನ್ನು ಖಂಡಿಸಿದರು.

ಬೆಂಗಳೂರು (ಸೆ.10): ಮದ್ದೂರು ಕಲ್ಲು ತೂರಾಟ ಪ್ರಕರಣದ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ. ನಾನು ಊರಿನಲ್ಲಿ ಇರಲಿಲ್ಲ, ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಪ್ರತಿಕ್ರಿಯಿಸಿದ್ದಾರೆ. ಅವರ ಹೇಳಿಕೆಗಳನ್ನು ಪತ್ರಿಕೆಯಲ್ಲಿ ನಾನೂ ಗಮನಿಸಿದ್ದೇನೆ. ಆದರೆ ಮಾಹಿತಿ ತಿಳಿಯದೆ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದರು.

ಬಿಜೆಪಿ ನಾಯಕರು ಮದ್ದೂರಿಗೆ ಭೇಟಿ ನೀಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು, ಬಿಜೆಪಿ ಅವರಿಗೆ ಬೇರೆ ಕೆಲಸವಿಲ್ಲ. ಜನರನ್ನು ಡಿವೈಡ್ ಮಾಡುವುದು, ಬೆಂಕಿ ಹಚ್ಚುವುದೇ ಅವರ ಕೆಲಸ ಎಂದು ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಅಭಿವೃದ್ಧಿ ಮಾಡಿಲ್ಲ. ದೆಹಲಿಗೆ ಹೋಗಿ ನರೇಗಾ, ತೆರಿಗೆ ಹಣ, ಕಾವೇರಿ, ಮೇಕೆದಾಟು, ಮಹದಾಯಿ ಯೋಜನೆಗಳಿಗೆ ಅನುಮತಿ ತರಲಿ. ಅದುಬಿಟ್ಟು ಮದ್ದೂರಿನಲ್ಲಾದ ಗಲಾಟೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಂಡು ಹಿಂದೂ-ಮುಸ್ಲಿಂ ಅಂತಾ ಡಿವೈಡ್ ಮಾಡುವುದು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇಂದು ಬೆಂಗಳೂರು ಶಾಸಕರ ಸಭೆ: ಡಿಕೆ ಶಿವಕುಮಾರ:

ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಬೆಂಗಳೂರು ನಗರ ಶಾಸಕರ ಸಭೆ ಕರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಿನ್ನೆಯೇ ಸಭೆ ನಿಗದಿಯಾಗಿತ್ತು. ನಾನು ಊರಿನಲ್ಲಿ ಇಲ್ಲ ಎಂದಿದ್ದರಿಂದ ಇಂದು ಆಗುತ್ತಿದೆ. ನೀರಾವರಿ ವಿಚಾರಗಳ ಬಗ್ಗೆ ಚರ್ಚಿಸುತ್ತೇವೆ ಎಂದರು. ಇದೇ ವೇಳೆ ಗ್ರೇಟರ್ ಬೆಂಗಳೂರು ಉಸ್ತುವಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗ್ರೇಟರ್ ಬೆಂಗಳೂರು ಉಸ್ತುವಾರಿ ವಿಚಾರದಲ್ಲಿ ಮಂತ್ರಿಗಳು ಕೇವಲ ಕ್ಷೇತ್ರದ ಕೆಲಸ ಮಾಡದೆ, ಜಿಲ್ಲೆಗಳ ಜವಾಬ್ದಾರಿಯನ್ನೂ ನಿರ್ವಹಿಸಬೇಕು. ಪಕ್ಷದಿಂದಲೂ ಇನ್ಮುಂದೆ ಜವಾಬ್ದಾರಿ ನೀಡುತ್ತೇವೆ ಎಂದರು.

ಸತೀಶ್ ಸೈಲ್ ಬಂಧಿಸುವವ ಅಗತ್ಯವೇನಿತ್ತು?

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಇಡಿ ಬಂಧನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಡಿಕೆ ಶಿವಕುಮಾರ ಅವರು, ಸತೀಶ್ ಸೈಲ್ ಅವರನ್ನು ಬಂಧಿಸುವ ಅಗತ್ಯ ಏನಿತ್ತು? ಕಾಂಗ್ರೆಸ್ ಶಾಸಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮನ್ನು ಹುಡುಕಿ ಹುಡುಕಿ ದಾಳಿ ಮಾಡುತ್ತಿದ್ದಾರೆ ಎಂದು ಇಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!