
ಕೂಡ್ಲಿಗಿ (ನ.10): ಗಾಂಧಿ ಭಾರತದ ನೆನಪಿನಲ್ಲಿ 100 ಕಾಂಗ್ರೆಸ್ ಕಚೇರಿಗಳಿಗೆ ಕೆಲವರು ಸೈಟ್ ನೀಡಿಲ್ಲ. ಯಾರು ಸೈಟ್ ನೀಡಲ್ಲವೋ ಅವರ ವರದಿಯನ್ನು ದೆಹಲಿಯ ಎಐಸಿಸಿ ನಾಯಕರು ಕೇಳಿದ್ದಾರೆ. ವರದಿಯನ್ನು ಸದ್ಯದಲ್ಲಿಯೇ ಕೊಡುತ್ತಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜಯನಗರ, ಬಳ್ಳಾರಿ ಜಿಲ್ಲೆಯ ಶಾಸಕರು ಕಾಂಗ್ರೆಸ್ ಕಚೇರಿಗೆ ಸೈಟ್ ನೀಡಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಕೆರೆ ತುಂಬಿಸುವ ಯೋಜನೆಗೆ ₹800 ಕೋಟಿಗೂ ಹೆಚ್ಚು ಹಣ ಖರ್ಚಾಗಿದ್ದು, ಮುಂದಿನ ದಿನಗಳಲ್ಲಿ ಕೆರೆಗೆ ನೀರು ತುಂಬಿಸಲು ಪ್ರತಿವರ್ಷ ₹80 ಲಕ್ಷ ವಿದ್ಯುತ್ ಬಿಲ್ ಬರುತ್ತದೆ. ಹೀಗಾಗಿ ಎಲ್ಲ ಕೆರೆಗಳನ್ನು ಹರಾಜಿಗೆ ಹಾಕಬೇಕು. ಆ ಮೂಲಕ ಮೀನು ಮರಿಗಳನ್ನು ಕೆರೆಯಲ್ಲಿ ಬಿಟ್ಟು ಅದರಿಂದ ಬಂದ ಆದಾಯದಿಂದ ವಿದ್ಯುತ್ ಬಿಲ್ ತುಂಬಬೇಕು ಎಂದರು.
ನಾನು ಹಾಗೂ ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರ ತಂದೆ ಬೊಮ್ಮಣ್ಣ ಅವರು ಬಂಗಾರಪ್ಪ ಅವರ ಶಿಷ್ಯರಾಗಿದ್ದೆವು. ನಾನು ಕೂಡ್ಲಿಗಿಗೆ ಬಂದಾಗ ಬೊಮ್ಮಣ್ಣ ಅವರು ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು ಎಂದಿದ್ದರು. ಈಗ ಅವರ ಸುಪುತ್ರನ ಕಾಲದಲ್ಲಿ ಅದು ಈಡೇರಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ