
ಬೆಂಗಳೂರು (ಡಿ.01): ಮುಂಬರುವ ಚುನಾವಣೆ ಎದುರಿಸಲು ಹಾಗೂ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಬಿಜೆಪಿಯ ನಾಥೂರಾಮ್ ಗೋಡ್ಸೆ ಹಾಗೂ ವೀರ ಸಾವರ್ಕರ್ ಅವರು ಪ್ರತಿಪಾದಿಸುವ ಹಿಂದುತ್ವಕ್ಕೆ ಪ್ರತಿಯಾಗಿ ಮಹಾತ್ಮಾ ಗಾಂಧೀಜಿ ಹಾಗೂ ಸ್ವಾಮಿ ವಿವೇಕಾನಂದರ ಹಿಂದುತ್ವ ಪ್ರತಿಪಾದಿಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.
ಮುಂಬರುವ ಪಂಚಾಯಿತಿ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಕುರಿತಂತೆ ಸೋಮವಾರ ದೇವನಹಳ್ಳಿಯ ಖಾಸಗಿ ಹೊಟೇಲ್ನಲ್ಲಿ ನಡೆದ ಹಿರಿಯ ನಾಯಕರ ಸಭೆಯಲ್ಲಿ, ಹಿಂದುತ್ವ ಒಂದು ಪಕ್ಷದ ಆಸ್ತಿಯಾಗಲು ಬಿಡಬಾರದು. ಬಿಜೆಪಿಯನ್ನು ಹಿಂದುತ್ವದ ಅಸ್ತ್ರದ ಮೂಲಕವೇ ಎದುರಿಸಬೇಕೆಂದು ಮುಖಂಡರು ಅಭಿಪ್ರಾಯಪಟ್ಟರು ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಶಾಸಕ ಸಿದ್ದು ಸವದಿ ಎಳೆದಾಡಿದ್ದ ಪುರಸಭೆ ಸದಸ್ಯೆಗೆ ಗರ್ಭಪಾತ
ಸಿದ್ದು ಸವದಿ ವಿರುದ್ಧ ಹೋರಾಟ
ಬಿಜೆಪಿ ಶಾಸಕ ಸಿದ್ದು ಸವದಿ ಅವರು ಹೆಣ್ಣು ಮಗಳೊಬ್ಬರ ಮೇಲೆ ನಡೆಸಿದ ದೌರ್ಜನ್ಯದಿಂದ ಹೆಣ್ಣಿಗೆ ಗರ್ಭಪಾತ ಆಗಿದೆ ಎಂದು ತಿಳಿದುಬಂದಿದೆ. ಇಷ್ಟಾದರೂ ಮುಖ್ಯಮಂತ್ರಿಯಾಗಲಿ, ಪೊಲೀಸ್ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ವಾರದ ಒಳಗಾಗಿ ಸ್ಥಳಕ್ಕೆ ಭೇಟಿ ನೀಡಿ ದೌರ್ಜನ್ಯ ನಡೆಸಿದವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನೆ ನಡೆಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ