ವಿಶೇಷ ವಿಮಾನದಲ್ಲಿ ಡಿಕೆಶಿ, ಬಿಜೆಪಿ ಶಾಸಕ ಜಂಟಿ ಪ್ರಯಾಣ; ಕುತೂಹಲ ಕೆರಳಿಸಿದ ಸೋಮಶೇಖರ್ ನಡೆ!

Published : Feb 19, 2024, 06:46 AM IST
ವಿಶೇಷ ವಿಮಾನದಲ್ಲಿ ಡಿಕೆಶಿ,  ಬಿಜೆಪಿ ಶಾಸಕ ಜಂಟಿ ಪ್ರಯಾಣ; ಕುತೂಹಲ ಕೆರಳಿಸಿದ ಸೋಮಶೇಖರ್ ನಡೆ!

ಸಾರಾಂಶ

ಬಿಜೆಪಿಗಿಂತ ಕಾಂಗ್ರೆಸ್‌ ನಾಯಕರೊಂದಿಗೆ ಹೆಚ್ಚು ಒಡನಾಟ ಮುಂದುವರೆಸಿರುವ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಒಟ್ಟಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದು ಸೋಮಶೇಖರ್ ಅವರು ಕಾಂಗ್ರೆಸ್ ಸೇರುವ ವದಂತಿಗೆ ಇನ್ನಷ್ಟು ಪುಷ್ಟಿ ನೀಡಿದೆ.

ಬೆಂಗಳೂರು (ಫೆ.19): ಬಿಜೆಪಿಗಿಂತ ಕಾಂಗ್ರೆಸ್‌ ನಾಯಕರೊಂದಿಗೆ ಹೆಚ್ಚು ಒಡನಾಟ ಮುಂದುವರೆಸಿರುವ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಒಟ್ಟಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದು ಸೋಮಶೇಖರ್ ಅವರು ಕಾಂಗ್ರೆಸ್ ಸೇರುವ ವದಂತಿಗೆ ಇನ್ನಷ್ಟು ಪುಷ್ಟಿ ನೀಡಿದೆ.

ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಭಾನುವಾರ ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದರು. ಡಿಸಿಎಂ ಅವರೊಂದಿಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಒಟ್ಟಿಗೆ ಪ್ರಯಾಣ ಬೆಳೆಸಿದ ಸೋಮಶೇಖರ್, ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮದಲ್ಲೂ ಡಿಕೆಶಿ ಅವರೊಂದಿಗೆ ಒಟ್ಟಿಗೆ ಕಾಣಿಸಿಕೊಂಡರು. ಸಮಾರಂಭದಲ್ಲಿ ಸಭಿಕರ ಸಾಲಿನಲ್ಲಿ ಕುಳಿತಿದ್ದ ಸೋಮಶೇಖರ್ ಅವರನ್ನು ಮರೆಯದ ಡಿಕೆಶಿ, ತಮ್ಮ ಭಾಷಣದಲ್ಲಿ ಸೋಮಶೇಖರ್ ಆಗಮನವನ್ನು ಉಲ್ಲೇಖಸಿದರು. ಕಾರ್ಯಕ್ರಮ ಮುಗಿಸಿ ಇಬ್ಬರೂ ಜತೆಯಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವ ಮಾಹಿತಿ ಲಭ್ಯವಾಗಿದೆ.

ಡಿಕೆ ಸಹೋದರರ ಹಾಡಿ ಹೊಗಳಿದ ಬಿಜೆಪಿ ಶಾಸಕ! ಕಾಂಗ್ರೆಸ್‌ನತ್ತ ಎಸ್‌ಟಿಎಸ್?

ಪದೇ ಪದೇ ಬಿಜೆಪಿ ಜತೆ ಅಂತರ ಕಾಯ್ದುಕೊಂಡು ಕಾಂಗ್ರೆಸ್‌ ಸಖ್ಯ ಬೆಳೆಸಿಕೊಳ್ಳುತ್ತಿರುವ ಸೋಮಶೇಖರ್‌ ಇತ್ತೀಚೆಗೆ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಅಭ್ಯರ್ಥಿಗೆ ಬದಲಾಗಿ ಕಾಂಗ್ರೆಸ್‌ನ ಅಭ್ಯರ್ಥಿ ಪುಟ್ಟಣ್ಣ ಅವರ ಪರ ಮತ ಯಾಚಿಸಿದ್ದರು. ಇದೀಗ ಶಿವಕುಮಾರ್‌ ಅವರೊಂದಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಮಾಡಿರುವುದು ಕುತೂಹಲ ಕೆರಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ಬಸ್ ಇಲ್ಲದೆ ರಾತ್ರಿವರೆಗೆ ಪರದಾಡಿದ ಶಾಲಾ ಮಕ್ಕಳು; ಅಧಿಕಾರಿಗಳಿಗೆ ಬೆವರಿಳಿಸಿದ ಶಾಸಕಿ ಕರೆಮ್ಮ ನಾಯಕ್!
ಮರಾಠಾ ಮಹಾಮೇಳಾವ್‌ನಲ್ಲಿ ಸಚಿವ ಸಂತೋಷ್ ಲಾಡ್ ಭಾಗಿ! ಗಡಿಭಾಗದ ಸಮಸ್ಯೆ ಬಗ್ಗೆ ಮಹತ್ವದ ಹೇಳಿಕೆ!