ಜಾರಕಿಹೊಳಿ ಸೀಡಿ ಕೇಸ್‌: ಜು. 27ರವರೆಗೆ ತನಿಖಾ ವರದಿ ಸಲ್ಲಿಕೆ ಬೇಡ, ಕೋರ್ಟ್‌

Published : Jul 21, 2021, 07:11 AM ISTUpdated : Jul 21, 2021, 07:15 AM IST
ಜಾರಕಿಹೊಳಿ ಸೀಡಿ ಕೇಸ್‌: ಜು. 27ರವರೆಗೆ ತನಿಖಾ ವರದಿ ಸಲ್ಲಿಕೆ ಬೇಡ, ಕೋರ್ಟ್‌

ಸಾರಾಂಶ

* ತನಿಖೆಯ ಅಂತಿಮ ವರದಿ ಸಲ್ಲಿಸದಂತೆ ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ * ಅರ್ಜಿ ವಿಚಾರಣೆ ಜು.27ಕ್ಕೆ ಮುಂದೂಡಿದ ನ್ಯಾಯಪೀಠ * ಎಸ್‌ಐಟಿ ಜು.27ರವರೆಗೆ ತನಿಖೆಯ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸಬಾರದು 

ಬೆಂಗಳೂರು(ಜು.21): ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್‌ ಆಯುಕ್ತರು ಹೊರಡಿಸಿದ ಆದೇಶ ರದ್ದುಪಡಿಸುವಂತೆ ಕೋರಿರುವ ಅರ್ಜಿ ವಿಚಾರಣೆಯನ್ನು ಜು.27ಕ್ಕೆ ಮುಂದೂಡಿರುವ ಹೈಕೋರ್ಟ್‌, ಅಲ್ಲಿಯವರೆಗೂ ತನಿಖೆಯ ಅಂತಿಮ ವರದಿ ಸಲ್ಲಿಸದಂತೆ ಎಸ್‌ಐಟಿಗೆ ಸೂಚಿಸಿದೆ. 

ಈ ಕುರಿತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ನಿಗದಿಯಾಗಿತ್ತು. ಆದರೆ, ಸಮಯ ಅಭಾವದಿಂದ ಅರ್ಜಿಯ ವಿಚಾರಣೆ ನಡೆಸಲು ಆಗದ ಕಾರಣ ಗುರುವಾರ ಅರ್ಜಿಯ ವಿಚಾರಣೆಗೆ ನಿಗದಿಪಡಿಸಲು ಕೋರ್ಟ್‌ ಅಧಿಕಾರಿಗೆ ನ್ಯಾಯಪೀಠ ಸೂಚಿಸಿತು.

'ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿಯಾಗುವುದು ಪಕ್ಕಾ'

ಈ ಮಧ್ಯೆ ಎಸ್‌ಐಟಿ ಪರ ವಕೀಲರು ಹಾಜರಾಗಿ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಎಫ್‌ಐಆರ್‌ಗಳ ಕುರಿತ ತನಿಖೆಯ ವರದಿಯನ್ನು ಸೋಮವಾರಕ್ಕೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ವಿಚಾರಣೆಯನ್ನು ಜು.26 ಮುಂದೂಡುವಂತೆ ಕೋರಿದರು. ಆದರೆ, ಪ್ರಕರಣದ ಯುವತಿ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್‌, ಮಂಗಳವಾರ ಅರ್ಜಿ ವಿಚಾರಣೆ ನಡೆಸುವಂತೆ ಕೋರಿದರು. ಆ ಮನವಿ ಮೇರೆಗೆ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಜು.27ಕ್ಕೆ ಮುಂದೂಡಿತು. ಅಲ್ಲದೆ, ಎಸ್‌ಐಟಿಯು ಈ ಹಿಂದೆ ನೀಡಿರುವ ಭರವಸೆಯಂತೆ ಜು.27ರವರೆಗೆ ತನಿಖೆಯ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸಬಾರದು ಎಂದು ಸೂಚಿಸಿತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆಪಿಎಸ್‌ಸಿ ಹಗರಣ: ಸಿಐಡಿ ಮುಂದೆ ತಪ್ಪೊಪ್ಪಿಕೊಂಡು, ಅಸಲಿ ಸತ್ಯ ಕಕ್ಕಿದ ಐಎಎಸ್ ಅಧಿಕಾರಿ ಜ್ಞಾನೇಂದ್ರ!
KPSC ಪಶುವೈದ್ಯಾಧಿಕಾರಿ 400 ಹುದ್ದೆ ಸೇಲ್ ಮಾಡಿದ್ದೇಗೆ? ಇಲ್ಲಿದೆ ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ರಿಪೋರ್ಟ್!