ಟಿಪ್ಪು ಜಯಂತಿ ಆಮಂತ್ರ​ಣ​ದಲ್ಲಿ ನನ್ನ ಹೆಸರು ಬೇಡ: ಅನಂತ್‌ ಹೆಗ​ಡೆ

Published : Nov 05, 2018, 10:49 AM IST
ಟಿಪ್ಪು ಜಯಂತಿ ಆಮಂತ್ರ​ಣ​ದಲ್ಲಿ ನನ್ನ ಹೆಸರು ಬೇಡ: ಅನಂತ್‌ ಹೆಗ​ಡೆ

ಸಾರಾಂಶ

ಟಿಪ್ಪು ಸುಲ್ತಾನ್‌ ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಹಾಕದಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.   

ಕಾರವಾರ: ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆಗೆ ತನ್ನ ವಿರೋಧ ಇದ್ದು, ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಹಾಕದಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 

ರಾಜ್ಯದ ಜನರ ವಿರೋಧದ ನಡುವೆ ರಾಜ್ಯ ಸರ್ಕಾರ ನ.10ರಂದು ಟಿಪ್ಪು ಜಯಂತಿ ಆಚರಿಸುತ್ತಿರುವುದು ಸರಿಯಲ್ಲ. ತಮ್ಮ ವಿರೋಧ ಕೂಡಾ ಇದ್ದು, ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಹಾಕುವುದು ಬೇಡ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. 

ಅನಂತಕುಮಾರ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಕಳೆದ ವರ್ಷವೂ ತಮ್ಮ ಹೆಸರು ಹಾಕದಂತೆ ಸೂಚಿಸಿದ್ದರು. ಆಗ ಶಿಷ್ಟಾಚಾರ ಪಾಲಿಸಬೇಕೆ ಬಿಡಬೇಕೆ ಎನ್ನುವ ಗೊಂದಲದಲ್ಲಿ ಸರ್ಕಾರ ಸಿಲುಕಿತ್ತು. ನಂತರ ಆಯಾ ಜನಪ್ರತಿನಿಧಿಗಳು ತಮ್ಮ ಹೆಸರು ಹಾಕುವುದು ಬೇಡ ಎಂದು ನಿರ್ಧರಿಸಿ ಸಂಸದರ, ಶಾಸಕರ ಹೆಸರನ್ನು ಕೈ ಬಿಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ
ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು