
ಬೆಂಗಳೂರು, (ಏ.11): ದೆಹಲಿಯಿಂದ ಕೊರೋನಾ ಹಚ್ಚಿಕೊಂಡು ಬಂದ ತಬ್ಲೀಘಿಗಳಿಗೆ ಚಿಕಿತ್ಸೆ ನೀಡಿದ್ದ ಬೆಂಗಳೂರಿನ ವೈದ್ಯನಿಗೆ ಸೊಂಕು ತಗುಲಿರುವುದು ದೃಢವಾಗಿದೆ.
ತಬ್ಲೀಘಿಗಳಿಗೆ ಚಿಕಿತ್ಸೆ ನೀಡಿದ್ದ ಬೆಂಗಳೂರಿನ ಶಿಫಾ ಆಸ್ಪತ್ರೆಯ ವೈದ್ಯರಿಗೆ ಕೊರೋನಾ ಸೋಂಕು ತಗುಲಿರುವುದು ವರದಿಯಿಂದ ಖಚಿತವಾಗಿದೆ.
2ನೇ ಹಂತದ ಲಾಕ್ಡೌನ್ ವಿಭಿನ್ನ: ಕರ್ನಾಟಕದಲ್ಲಿ ಹೇಗಿರಲಿದೆ..?
ತಬ್ಲೀಘಿ ಜಮಾತ್ ಮಾರ್ಕಜ್ ಧಾರ್ಮಿಕ ಸಭೆಗೆ ಹೋಗಿದ್ದ ಬಂದಿದ್ದವರಿಗೆ ಚಿಕಿತ್ಸೆ ನೀಡಿದ್ದರಿಂದ ವೈದ್ಯನಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಶಿಫಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಬಂದ್ ಮಾಡಲು ಬಿಬಿಎಂಪಿ ಮುಂದಾಗಿದೆ.
ಅಲ್ಲದೇ ವೈದ್ಯರಾಗಿರುವ ಕಾರಣ ಅವರು ಹಲವರಿಗೆ ಚಿಕಿತ್ಸೆ ನೀಡಿದ್ದಾರೆ. ಹೀಗಾಗಿ ಪ್ರಾಥಮಿಕ ಸಂಪರ್ಕಿತರನ್ನ ಪತ್ತೆ ಮಾಡುವ ಕಾರ್ಯ ಸಹ ನಡೆಯುತ್ತಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ವೈದ್ಯ ಸೇರಿದಂತೆ ಸದ್ಯದ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಒಟ್ಟು 215 ಒರೋನಾ ಕೇಸ್ಗಳು ಪತ್ತೆಯಾಗಿದ್ದು, 39 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ