ಭದ್ರಾವತಿಯಲ್ಲಿ ಹೃದಯ ವಿದ್ರಾವಕ ಘಟನೆ: ಮಾಲೀಕನ ಶವ ಕಂಡು ಶ್ವಾನವೂ ನಿಧನ, ಒಟ್ಟಿಗೆ ಅಂತ್ಯಕ್ರಿಯೆ!

Kannadaprabha News   | Kannada Prabha
Published : Nov 04, 2025, 05:36 AM IST
Dog dies after owner s death in bhadravathi shivamogga

ಸಾರಾಂಶ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ, ಅನಾರೋಗ್ಯದಿಂದ ಮೃತಪಟ್ಟ ಲಾರೆನ್ಸ್ ಎಂಬುವವರ ಶವವನ್ನು ಕಂಡು ಅವರ ಪ್ರೀತಿಯ ನಾಯಿ ಕೂಡ ಪ್ರಾಣ ಬಿಟ್ಟಿದೆ. ಮಾಲೀಕನ ಶವದ ಪಕ್ಕದಲ್ಲೇ ಮಲಗಿ ದುಃಖ ವ್ಯಕ್ತಪಡಿಸಿದ ಶ್ವಾನ, ಅಲ್ಲೇ ಕೊನೆಯುಸಿರು., ಈ ಘಟನೆ ಮನುಷ್ಯ-ಪ್ರಾಣಿ ನಡುವಿನ ಅವಿನಾಭಾವ ಸಂಬಂಧಕ್ಕೆ ಸಾಕ್ಷಿಯಾಗಿದೆ.

ಭದ್ರಾವತಿ (ನ.4): ಮನೆ ಮಾಲೀಕನ ಮೃತದೇಹ ನೋಡಿ ಆತನ ಪ್ರೀತಿಯ ನಾಯಿ ಕೂಡ ಪ್ರಾಣ ಬಿಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಮಾಲೀಕನ ಶವ ಕಂಡು ಮಲಗಿದ್ದಲ್ಲೇ ಕೊನೆಯುಸಿರು

ಇತ್ತೀಚೆಗೆ ನಗರದ ಜಿಂಕ್ ಲೈನ್ ನಿವಾಸಿ ಲಾರೆನ್ಸ್ (61) ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇವರ ಮೃತದೇಹವನ್ನು ಮನೆಗೆ ತಂದಾಗ ನೆಚ್ಚಿನ ಮಾಲೀಕನ ಶವ ಕಂಡು ಶವದ ಪಕ್ಕದಲ್ಲೇ ಮಲಗಿ ತೀವ್ರ ದುಖಃ ವ್ಯಕ್ತಪಡಿಸಿದ ಶ್ವಾನವು ಅಲ್ಲೇ ಕೊನೆಯುಸಿರೆಳೆದಿದೆ.

ಮಾಲೀಕನ ಶವದೊಂದಿಗೆ ಶ್ವಾನದ ಅಂತ್ಯಕ್ರಿಯೆ

ಲಾರೆನ್ಸ್ ಅಂತ್ಯಕ್ರಿಯೆ ಬಳಿಕ ಅವರೊಟ್ಟಿಗೆ ಮೃತಪಟ್ಟ ಶ್ವಾನದ ಮೃತದೇಹವನ್ನು ಮನೆಯ ಹಿಂಭಾಗದಲ್ಲಿಯೇ ಮಣ್ಣು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಯಿ ಜೊತೆ ವಾಕ್ ಮಾಡ್ತೀರಾ ಹುಷಾರ್: ನಿಮ್ಮ ನಾಯಿನೂ ಬಿಡಲ್ಲ ಕಳ್ಳರು: ವೀಡಿಯೋ

ಮನುಷ್ಯರ ಜೊತೆ ಮೂಕ ಪ್ರಾಣಿಗಳು ಸಹ ಬಿಟ್ಟಿರಲಾರದ ಸಂಬಂಧ ಹೊಂದಿರುತ್ತವೆ. ಅದರಲ್ಲೂ ಅವರೊಂದಿಗೆ ಕುಟುಂಬದ ಸದಸ್ಯರಂತೆಯೇ ಬದುಕುತ್ತಿರುತ್ತವೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!