
ಭದ್ರಾವತಿ (ನ.4): ಮನೆ ಮಾಲೀಕನ ಮೃತದೇಹ ನೋಡಿ ಆತನ ಪ್ರೀತಿಯ ನಾಯಿ ಕೂಡ ಪ್ರಾಣ ಬಿಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಇತ್ತೀಚೆಗೆ ನಗರದ ಜಿಂಕ್ ಲೈನ್ ನಿವಾಸಿ ಲಾರೆನ್ಸ್ (61) ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇವರ ಮೃತದೇಹವನ್ನು ಮನೆಗೆ ತಂದಾಗ ನೆಚ್ಚಿನ ಮಾಲೀಕನ ಶವ ಕಂಡು ಶವದ ಪಕ್ಕದಲ್ಲೇ ಮಲಗಿ ತೀವ್ರ ದುಖಃ ವ್ಯಕ್ತಪಡಿಸಿದ ಶ್ವಾನವು ಅಲ್ಲೇ ಕೊನೆಯುಸಿರೆಳೆದಿದೆ.
ಲಾರೆನ್ಸ್ ಅಂತ್ಯಕ್ರಿಯೆ ಬಳಿಕ ಅವರೊಟ್ಟಿಗೆ ಮೃತಪಟ್ಟ ಶ್ವಾನದ ಮೃತದೇಹವನ್ನು ಮನೆಯ ಹಿಂಭಾಗದಲ್ಲಿಯೇ ಮಣ್ಣು ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಯಿ ಜೊತೆ ವಾಕ್ ಮಾಡ್ತೀರಾ ಹುಷಾರ್: ನಿಮ್ಮ ನಾಯಿನೂ ಬಿಡಲ್ಲ ಕಳ್ಳರು: ವೀಡಿಯೋ
ಮನುಷ್ಯರ ಜೊತೆ ಮೂಕ ಪ್ರಾಣಿಗಳು ಸಹ ಬಿಟ್ಟಿರಲಾರದ ಸಂಬಂಧ ಹೊಂದಿರುತ್ತವೆ. ಅದರಲ್ಲೂ ಅವರೊಂದಿಗೆ ಕುಟುಂಬದ ಸದಸ್ಯರಂತೆಯೇ ಬದುಕುತ್ತಿರುತ್ತವೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ