ವಿರೋಧಿಸುವರು ಅನ್ನಭಾಗ್ಯದ ಅಕ್ಕಿ ತಿಂತಾ ಇಲ್ವೋ?: ಸಿದ್ದು ಪ್ರಶ್ನೆ

Published : Feb 17, 2019, 08:47 AM IST
ವಿರೋಧಿಸುವರು ಅನ್ನಭಾಗ್ಯದ ಅಕ್ಕಿ ತಿಂತಾ ಇಲ್ವೋ?: ಸಿದ್ದು ಪ್ರಶ್ನೆ

ಸಾರಾಂಶ

ತನ್ನನ್ನು ವಿರೋಧಿಸುವವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

 

ಚಾಮರಾಜನಗರ[ಫೆ.17]: ‘ಜಾತಿ, ಜಾತಿ ಎನ್ನುವ ಕೊಳಕು ಮನಸ್ಥಿತಿಯಿಂದ ನಾನು ಮತ್ತೇ ಮುಖ್ಯಮಂತ್ರಿ ಆಗುವುದನ್ನು ತಡೆದರು. ನನ್ನ ವಿರೋಧಿಸುವರು ಮನೆಯಲ್ಲಿ ಅನ್ನಭಾಗ್ಯದ ಅಕ್ಕಿ ಅನ್ನ ತಿನ್ನುತ್ತಿಲ್ಲವೇ?’ ಎಂದು ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಶನಿವಾರ ನಡೆದ ಸಂಸದ ಆರ್‌.ಧ್ರುವನಾರಾಯಣರ ಸಾಧನೆಗಳ ಕಿರುಹೊತ್ತಿಗೆ ಬಿಡುಗಡೆ ಸಮಾರಂಭದಲ್ಲಿ ಯಾವುದೇ ಜಾತಿ ಹೆಸರೆತ್ತದೆ ಜಾತಿಯ ಅಸಮಾನತೆ ಬಗ್ಗೆ ಅವರು ಮಾತನಾಡಿದರು.

4 ಕೋಟಿ ಮಂದಿಗೆ ಪಡಿತರ ಚೀಟಿ ನೀಡಿದ್ದೇನೆ. ಜಾತಿಯಿಂದಾಗಿ ನನ್ನ ವಿರೋಧಿಸುವರ ಮನೆಯಲ್ಲಿ ಅನ್ನ ತಿನ್ನುವುದಿಲ್ಲವೇ? ಜಾತಿಯ ಒಂದೇ ಕಾರಣಕ್ಕೆ ಅನ್ನ ತಿಂದು ವಿರೋಧಿಸುತ್ತಾರೆ ಎಂದರು. ಎಲ್ಲರಿಗೂ ಸಾಲಮನ್ನಾ ಮಾಡಿದ್ದೀನಿ, ಇದರಿಂದ ನನ್ನ ವಿರೋಧ ಮಾಡುವವರಿಗೇ ಜಾಸ್ತಿ ಅನೂಕೂಲವಾಗಿರುವುದು. ಹಾಲಿಗೆ ಸಬ್ಸಿಡಿ ಕೊಟ್ಟೆ, ನನ್ನ ವಿರೋಧ ಮಾಡುವವರೇ ಹೆಚ್ಚು ಹಾಲು ಕರೆಯುವವರು. ನೋಡಿ ಹೇಗಿದೆ ವ್ಯವಸ್ಥೆ? ಆದ್ದರಿಂದಲೇ ಅಧಿಕಾರ ಸಮಾನವಾಗಿ ಹಂಚಿಕೆಯಾಗಬೇಕು. ಬಲಾಢ್ಯರ, ಮೇಲ್ವರ್ಗದವರ ಕೈಯಲ್ಲಷ್ಟೆಇರಬಾರದು ಎಂದು ಬಾಬಾಸಾಹೇಬರು ಹೇಳಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಜನ್ಮದಿನದಂದೇ ಹೆಚ್‌ಡಿಕೆ ತೋಳಿಗೆ ಬಂತು ದೈವಿ ಶಕ್ತಿ! 'ಶಿವ ತಾಯತ' ಕಟ್ಟಿದ ಬಿಜೆಪಿ ಕಾರ್ಯಕರ್ತರು!
ಸಿಎಂ ಸ್ಥಾನದ ಜಟಾಪಟಿ: 'ಉರಿತೀರೋದಕ್ಕೆ ಉಪ್ಪು ಹಾಕಬೇಡ' ಎಂದ ಸಿಎಂ, 'ಹಾಗಾದ್ರೆ ಉರೀತಿದೆಯಾ?' - ಅಶೋಕ್..