
ಕೊಡಗು: ಕುಡಿದ ಮತ್ತಿನಲ್ಲಿ ಸೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು 70 ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಕೊಡಗಿನಲ್ಲಿ ನಡೆದಿದೆ. ಇಲ್ಲಿನ ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಕೊಲೆಯಾದ ಜೋಡಿಯನ್ನು 55 ವರ್ಷದ ಕುಂಞರಾಮ ಹಾಗೂ 45 ವರ್ಷದ ಯಶೋಧ ಎಂದು ಗುರುತಿಸಲಾಗಿದೆ.
ಕುಡಿದ ಮತ್ತಿನಲ್ಲಿ ಯಶೋಧ ಅವರ ಸೋದರ 70 ವರ್ಷದ ಚಂದು ಎಂಬುವವರು ತನ್ನ ಸಹೋದರಿ ಆಕೆಯ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಪರಸ್ಪರ ಒಪ್ಪಿಗೆ ಮೇರೆಗೆ ಕುಂಞರಾಮ ಮತ್ತು ಯಶೋಧ ಸಹಜೀವನ ನಡೆಸುತ್ತಿದ್ದರು. ಇದೇ ವಿಷಯಕ್ಕೆ ಯಶೋಧ ಸಹೋದರ ಆಗಾಗ ಗಲಾಟೆ ಮಾಡುತ್ತಿದ್ದ. ನಿನ್ನೆ ಸಂಜೆಯೂ ಅದೇ ರೀತಿ ಕುಡಿದು ಮೂವರು ಗಲಾಟೆ ಮಾಡಿದ್ದಾರೆ. ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಕುಡಿದು ಬಂದು ಗಲಾಟೆ ಮಾಡಿದ ಚಂದು ಬಳಿಕ ಇಬ್ಬರನ್ನು ಮಾರಕಾಯುಧದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ: Prison break:ಜೈಲಿನಿಂದ ತಪ್ಪಿಸಿಕೊಳ್ಳಲು ನಿರಂತರ 5 ವರ್ಷ ಸುರಂಗ ಕೊರೆದ ಕೈದಿ ತಲುಪಿದ್ದು ಎಲ್ಲಿಗೆ?
ಘಟನೆಗೆ ಸಂಬಂಧಿಸಿದಂತೆ ಭಾಗಮಂಡಲ ಪೊಲೀಸರು ಆರೋಪಿ ಚಂದುವನ್ನು ಬಂಧಿಸಿದ್ದಾರೆ. ಮೃತರ ಶವಗಳನ್ನು ಕೊಡಗು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಇದನ್ನೂ ಓದಿ: ದಯವಿಟ್ಟು ನನ್ನ ಬೆಳೆ ಖರೀದಿಸಿ... ನನ್ನ ಮಗಳ ಮದುವೆ ನಾಳೆ: ಮಾರುಕಟ್ಟೆಯಲ್ಲಿ ಅಳಲು ಶುರು ಮಾಡಿದ ರೈತ
ಕೊಲೆಯಾದ ಕುಂಞರಾಮಮ, ಯಶೋಧ ಹಾಗೂ ಕೊಲೆ ಮಾಡಿದ ಚಂದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ