ಕಾಂಗ್ರೆಸ್‌ನವರೇ ಕೋಮುವಾದಿಗಳು; ಸಿದ್ದರಾಮಯ್ಯ ವಿರುದ್ಧ ಅಶ್ವತ್ಥ ನಾರಾಯಣ ಕಿಡಿ

Published : Dec 06, 2023, 04:07 AM IST
ಕಾಂಗ್ರೆಸ್‌ನವರೇ ಕೋಮುವಾದಿಗಳು; ಸಿದ್ದರಾಮಯ್ಯ ವಿರುದ್ಧ ಅಶ್ವತ್ಥ ನಾರಾಯಣ ಕಿಡಿ

ಸಾರಾಂಶ

ಸಿಎಂ ಸಿದ್ದರಾಮಯ್ಯ ಒಂದೇ ಆಡಳಿತ ಕೊಡಬೇಕು. ಅವರು ಎಲ್ಲ ಸಮುದಾಯಕ್ಕೂ ಸಮನಾಗಿ ನೋಡಿಕ್ಕೊಳ್ಳಬೇಕು. ಆದರೆ, ರಾಜಕೀಯ ಪ್ರೇರಿತವಾಗಿ ಮುಸ್ಲಿಂ ಸಮುದಾಯಕ್ಕೆ‌ ಪುಷ್ಟಿಕರಣ ಮಾಡುತ್ತಾರೆ. ಕಾಂಗ್ರೆಸ್‌ನವರು ಕೋಮುವಾದಿಗಳು ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಹೇಳಿದರು.

ಬೆಳಗಾವಿ (ಡಿ.6) :  ಸಿಎಂ ಸಿದ್ದರಾಮಯ್ಯ ಒಂದೇ ಆಡಳಿತ ಕೊಡಬೇಕು. ಅವರು ಎಲ್ಲ ಸಮುದಾಯಕ್ಕೂ ಸಮನಾಗಿ ನೋಡಿಕ್ಕೊಳ್ಳಬೇಕು. ಆದರೆ, ರಾಜಕೀಯ ಪ್ರೇರಿತವಾಗಿ ಮುಸ್ಲಿಂ ಸಮುದಾಯಕ್ಕೆ‌ ಪುಷ್ಟಿಕರಣ ಮಾಡುತ್ತಾರೆ. ಕಾಂಗ್ರೆಸ್‌ನವರು ಕೋಮುವಾದಿಗಳು ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲರನ್ನೂ ಸಮಾನವಾಗಿ ನೋಡಿಕ್ಕೊಳ್ಳಬೇಕು. ಕಾಂಗ್ರೆಸ್‌ನ ಕೋಮುವಾದಿಗಳಿಂದ ರಾಜ್ಯದಲ್ಲಿ ಸ್ವಾಸ್ಥ್ಯ ಇಲ್ಲದಾಗಿದೆ ಎಂದರು.

ಪೊಲೀಸರು ಹಾಗೂ ವಕೀಲರ ನಡುವೆ ಬಹಿರಂಗ ಸಂಘರ್ಷಕ್ಕೆ ವಿರಾಮ ?  ಹೈಕೋರ್ಟ್ ಸೂಚನೆ ಏನು?

ಮುಸ್ಲಿಂ ಸಮುದಾಯಕ್ಕೆ‌ ₹10 ಸಾವಿರ ಕೋಟಿ ಖರ್ಚು ಮಾಡುವ ಸಾಮರ್ಥ್ಯ ಇದೆಂಬ ಸಿದ್ಧ ಹೇಳಿಕೆಗೆ ಪ್ರತಿಕ್ರಿಯೆ ‌ನೀಡಿದ ಅವರು, ಬರಗಾಲ, ರೈತರ ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಪರಿಹಾರ ಕೊಡಲು ಆಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಎಲ್ಲರಿಗೂ ಕಿವಿಗೆ ಹೂ ಇಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ವಿಪಕ್ಷ ನಾಯಕ ಆರ್.ಅಶೋಕಕ್ಕಿಂತ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಶಾಸಕರು ಬೆಂಬಲ ಕೊಡುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಶಾಸಕರು ಯತ್ನಾಳ ಅವರ ಬಳಿ ಸಮಸ್ಯೆ ಹೇಳಿಕೊಂಡರೆ ತಪ್ಪೇನು ಎಂದು ಪ್ರಶ್ನಿಸಿದರು.

ಭವಾನಿ ರೇವಣ್ಣರ ಗಲಾಟೆ ಬೆನ್ನಲ್ಲೇ ಎಚ್‌ಡಿ ರೇವಣ್ಣರ ವಿರುದ್ಧ ಅವಹೇಳನಕಾರಿ ಮಾತಾಡಿದ ಶಾಸಕ ಶಿವಲಿಂಗೇಗೌಡ!

ಅಶೋಕಕ್ಕಿಂತ ಬಸನಗೌಡ ಪಾಟೀಲಗೆ ಶಾಸಕರ ಬೆಂಬಲ ಹೆಚ್ಚು. ಯತ್ನಾಳ್ ಯತ್ನಾಳನೆ, ಆದರೆ ಅಶೋಕ. ಆರ್.ಆಶೋಕನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!