ಕೊರೋನಾ ಸೋಂಕಿತರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ

Published : Apr 25, 2021, 03:01 PM ISTUpdated : Apr 25, 2021, 04:08 PM IST
ಕೊರೋನಾ ಸೋಂಕಿತರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ

ಸಾರಾಂಶ

ಕೋವಿಡ್‌ ವಾರ್ಡ್‌ಗೆ ತೆರಳಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ/ ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಹೊಸ ಒಪಿಡಿ ಸ್ಥಾಪನೆಗೆ ಕ್ರಮ ಎಂದು ಭರವಸೆ.

ಬೆಂಗಳೂರು, (ಏ.25): ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಭಾನುವಾರ ಬೆಳಗ್ಗೆ ಕೆ.ಸಿ.ಜನರಲ್‌ ಆಸ್ಪತ್ರೆಯ ಕೋವಿಡ್‌ ಚಿಕಿತ್ಸಾ ಘಟಕಗಳಿಗೆ ಭೇಟಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದರು. 

"

ಬೆಂಗಳೂರು ಸೆಂಟ್ರಲ್‌ ಸಂಸದ ಪಿ.ಸಿ.ಮೋಹನ್‌ ಅವರೊಂದಿಗೆ ಆಸ್ಪತ್ರೆಗೆ ಬಂದ ಅವರು ಪಿಪಿಎ ಕಿಟ್‌ ಧರಿಸಿ ಸೋಂಕಿತರನ್ನು ಭೇಟಿ ಮಾಡಿ ಮಾತನಾಡಿದರು. ಚಿಕಿತ್ಸೆಯ ಬಗ್ಗೆ ಅವರೊಂದಿಗೆ ಮಾಹಿತಿ ಪಡೆದುಕೊಂಡರು. ಮೋಹನ್ ಅವರೂ ಪಿಪಿಇ ಕಿಟ್ ಧರಿಸಿಯೇ ವಾರ್ಡ್ ಪರಿಶೀಲಿಸಿದರು. 

ರಾಜ್ಯದಲ್ಲಿ ಆಕ್ಸಿಜನ್​​ ಕೊರತೆ: ಅನುಮಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ 

ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಮಾಡ್ಯೂಲರ್‌ ಕೋವಿಡ್‌ ಐಸಿಯು ಘಟಕಗಳ ಒಳಕ್ಕೂ ಅವರು ತೆರಳಿ ಅಲ್ಲಿನ ವ್ಯವಸ್ಥೆಯನ್ನು ಕೂಲಂಕಶವಾಗಿ ಪರಿಶೀಲನೆ ಮಾಡಿದರು. 

ಕೆಸಿ ಜನರಲ್‌ನಲ್ಲಿ ಇನ್ನೊಂದು ಒಪಿಡಿ 
ಕೆಸಿ ಜನರಲ್ ಆಸ್ಪತ್ರೆಯಲ್ಲಿ ಹೆಚ್ಚು ತಜ್ಞ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಅತ್ಯುತ್ತಮ ಸೌಲಭ್ಯಗಳು ಕೂಡ ಇವೆ. ಹೀಗಾಗಿ ಇಲ್ಲಿಯೇ ಇನ್ನೊಂದು ದೊಡ್ಡ ಪ್ರಮಾಣದ ಹೊರ ರೋಗಿಗಳ ವಿಭಾಗ (ಒಪಿಡಿ)ವನ್ನು ತೆರೆಯಲು ಸರಕಾರ ನಿರ್ಧರಿಸಿದೆ ಎಂದು ಡಿಸಿಎಂ ಹೇಳಿದರು. 

ಮನ್‌ ಕೀ ಬಾತ್‌ನಲ್ಲಿ ನರ್ಸ್‌ ಬಗ್ಗೆ ಪಿಎಂ ಮೆಚ್ಚುಗೆ 
ಈ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಖಾ ಎಂಬ ನರ್ಸ್‌ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ʼಮನ್‌ ಕೀ ಬಾತ್‌ʼ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಅತ್ಯಂತ ಸಂತೋಷದ ಸಂಗತಿ. ಅವರಿಗೆ ಸರಕಾರದ ಮೆಚ್ಚುಗೆ ಇದೆ. ಹಾಗೆಯೇ ಆಸ್ಪತ್ರೆಯ ಎಲ್ಲ ವೈದ್ಯರು, ನರ್ಸ್‌ಗಳು ಹಾಗೂ ಪ್ಯಾರಾ ಮಡಿಕಲ್‌ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹೇಳಿದರು. 

ಬೆಡ್‌ ಕೊರತೆ ನೀಗಿಸುತ್ತೇವೆ 
ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕಿತರಿಗೆ ಹಾಸಿಗೆಗಳ ಕೊರತೆ ಇದೆ. ಅದನ್ನು ಇಲ್ಲ ಎಂದು ಹೇಳುತ್ತಿಲ್ಲ. ಆದರೆ, ಆ ಸಮಸ್ಯೆಯನ್ನು ಬಗೆಹರಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಲಾಗುತ್ತಿದೆ. ಒಂದು ವೇಳೆ ಬೆಡ್‌ ಸಿಗದಿದ್ದರೂ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಯಾರೇ ಬಂದರೂ ಅವರನ್ನು ತಪಾಸಣೆ ಮಾಡಿ ಉತ್ತಮ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವೆ ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.  

ಈ ಆಸ್ಪತ್ರೆಯಲ್ಲಿ 450 ಬೆಡ್‌ ಇದೆ. ಸಾಕಾಗುತ್ತಿಲ್ಲ ನಿಜ, ಆದರೆ ದಿನಕ್ಕೆ ಕೊನೆಪಕ್ಷ 2,000 ಜನರಿಗೆ ಚಿಕಿತ್ಸೆ ಸಿಗುವ ವ್ಯವಸ್ಥೆ ಆಗಬೇಕು. ಅದಕ್ಕೆ ಅಗತ್ಯವಾದ ಪ್ರಯತ್ನ ಮಾಡುತ್ತಿದ್ದೇವೆ. ಒಪಿಡಿಗೆ ಬಂದು ಚಿಕಿತ್ಸೆ ಪಡೆದು ಮನೆಯಲ್ಲೇ ಹೋಮ್‌ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯಬಹುದು. ಉತ್ತಮ ಔಷಧಿಯನ್ನು ನೀಡಲಾಗುತ್ತಿದೆ. ರೋಗ ಲಕ್ಷಣಗಳಿದ್ದವರೆಲ್ಲ ಬಂದು ಆಸ್ಪತ್ರೆಗೆ ದಾಖಲಾಗಬೇಕು ಎಂದಲ್ಲ, ಮನೆಯಲ್ಲೇ ಇದ್ದು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದರು.

ರೆಮಿಡಿಸ್ವಿರ್‌ ಕೊರತೆ ಆಗಲ್ಲ 
ರಾಜ್ಯದಲ್ಲಿ ರೆಮಿಡಿಸ್ವಿರ್‌ ಕೊರತೆ ಬಹತೇಕ ನೀಗುತ್ತಿದೆ. ಕೇಂದ್ರ ಸರಕಾರದಿಂದ ಇವತ್ತು 1,50,000ಕ್ಕಿಂತ ಹೆಚ್ಚಿನ ರೆಮಿಡಿಸ್ವಿರ್‌ ವೇಲ್ಸ್‌ ರಾಜ್ಯಕ್ಕೆ ಹಂಚಿಕೆಯಾಗಿದೆ. ಇನ್ನು ಕೊರತೆಯಾಗಲ್ಲ, ಅಗತ್ಯ ಇರುವವರಿಗೆ ನೀಡಲಾಗುವುದು. ಅದಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್