ಕೊರೋನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿ: ಡಿಆರ್‌ಡಿಒ ಔಷಧಕ್ಕೆ 990 ರು.

Kannadaprabha News   | Asianet News
Published : May 29, 2021, 07:30 AM IST
ಕೊರೋನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿ: ಡಿಆರ್‌ಡಿಒ ಔಷಧಕ್ಕೆ 990 ರು.

ಸಾರಾಂಶ

* ನೀರಿನಲ್ಲಿ ಬೆರೆಸಿ ಸೇವಿಸಬಹುದಾದ ಪೌಡರ್‌ * 2-ಡಿಜಿ’ ಕೋವಿಡ್‌ ಚಿಕಿತ್ಸೆಗೆಂದೇ ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿರುವ ಜಗತ್ತಿನ ಕೆಲವೇ ಔಷಧಗಳಲ್ಲಿ ಒಂದು * ತುರ್ತು ಬಳಕೆಗೆ ಅನುಮೋದನೆ ನೀಡಿದ್ದ ಡಿಸಿಜಿಐ   

ಬೆಂಗಳೂರು(ಮೇ.29): ಡಾ.ರೆಡ್ಡೀಸ್‌ ಲ್ಯಾಬ್‌ ಮತ್ತು ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿ ಎನ್ನಲಾದ 2-ಡಿಜಿ ಔಷಧದ ಪ್ರತಿ ಸ್ಯಾಚೆಗೆ 990 ರು. ದರ ನಿಗದಿಪಡಿಸಲಾಗಿದೆ.  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಈ ಮಾಹಿತಿಯನ್ನು ಟ್ವೀಟ್‌ ಮಾಡಿದ್ದಾರೆ.

2 ಡಿಯೋಕ್ಸಿ-ಡಿ-ಗ್ಲುಕೋಸ್‌ ಅಥವಾ 2-ಡಿಜಿ ಎಂದು ಕರೆಯಲಾಗುವ ಈ ಔಷಧ ಪೌಡರ್‌ ರೂಪದಲ್ಲಿ ಲಭ್ಯವಿದೆ. ನೀರಿನಲ್ಲಿ ಬೆರೆಸಿ ತೆಗೆದುಕೊಳ್ಳಬಹುದಾಗಿದೆ. ಈ ಔಷಧವನ್ನು ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಗದಿತ ದರದಲ್ಲಿ ಇನ್ನಷ್ಟೇ ಪೂರೈಸಬೇಕಾಗಿದೆ. 2 ಮತ್ತು 3ನೇ ಕ್ಲಿನಿಕಲ್‌ ಪ್ರಯೋಗದಲ್ಲಿ ಯಶಸ್ವಿಯಾದ ಬಳಿಕ ಈ ಔಷಧದ ತುರ್ತು ಬಳಕೆಗೆ ದೇಶದ ಪ್ರಮುಖ ಔಷಧ ನಿಯಂತ್ರಕ ಸಂಸ್ಥೆ ಡ್ರಗ್ಸ್‌ ಕಂಟ್ರೋಲರ್‌ ಜನರಲ್‌ ಆಫ್‌ ಇಂಡಿಯಾ(ಡಿಸಿಜಿಐ) ಅನುಮೋದನೆ ನೀಡಿತ್ತು.

ಡಿಆರ್‌ಡಿಒನಿಂದ ಕೋವಿಡ್‌ ಪ್ರತಿಕಾಯ ಪತ್ತೆ ಕಿಟ್‌!

2-ಡಿಜಿ’ ಕೋವಿಡ್‌ ಚಿಕಿತ್ಸೆಗೆಂದೇ ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿರುವ ಜಗತ್ತಿನ ಕೆಲವೇ ಔಷಧಗಳಲ್ಲಿ ಒಂದು. ಆದರೆ, ಇದರಿಂದ ಕೋವಿಡ್‌ ಗುಣಮುಖವಾಗುವುದು ಖಚಿತವಾಗಿಲ್ಲ. ರೆಮ್‌ಡೆಸಿವಿರ್‌, ಐವರ್ಮೆಕ್ಟಿನ್‌, ಪ್ಲಾಸ್ಮಾ ಥೆರಪಿ, ಕೆಲವು ಸ್ಟಿರಾಯ್ಡ್‌ಗಳನ್ನು ಕೋವಿಡ್‌ ಚಿಕಿತ್ಸೆಗೆ ಪ್ರಯೋಗಾತ್ಮಕವಾಗಿ ಬಳಸಿಕೊಳ್ಳಲಾಗುತ್ತಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!