
ಮೈಸೂರು (ಸೆ.21): ಮುಡಾ ಅನುದಾನ ಬಳಕೆ ಮಾಡುವುದರಲ್ಲಿ ಯಾವುದೇ ತಪ್ಪುಗಳು ಆಗಿಲ್ಲ ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ ಮಾತ್ರ ಹಣ ಬಳಕೆಯಾಗಿದೆ ಎಂದು ಎಂಎಲ್ಸಿ ಡಾ ಯತೀಂದ್ರ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಯೊಂದಿಗೆ ಮಾತನಾಡಿದ ಅವರು, ಮುಡಾ ಇರುವುದೇ ಜನರ ಒಳಿತಿಗಾಗಿ, ಜನರಿಗಾಗಿ ಹಣ ಬಳಸಿರುವುದರಲ್ಲಿ ತಪ್ಪೇನಿದೆ? ಎಲ್ಲದಕ್ಕೂ ಸುಖಾಸುಮ್ಮನೆ ಆರೋಪ ಮಾಡುತ್ತಾ ಹೋದರೆ ಹೇಗೆ ಹೇಳಿ ಎಂದರು.
ಶಿಕ್ಷಣಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಹೆಚ್ಚಿನ ಅನುದಾನ ನೀಡಬೇಕು: ಯತೀಂದ್ರ ಸಿದ್ದರಾಮಯ್ಯ
ನಮ್ಮ ತಂದೆಯ ಮೇಲೆ ಮಾಡುತ್ತಿರುವ ಎಲ್ಲ ಆರೋಪಗಳು ಬೋಗಸ್. ಸರ್ಕಾರದ ವಿರುದ್ಧ ಮಾತನಾಡಲು ಯಾರಿಗೂ ಯಾವ ವಿಚಾರಗಳು ಸಿಗುತ್ತಿಲ್ಲ. ಹೀಗಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇಡೀ ವಿಶ್ವದಲ್ಲಿ ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು. ಇಂತಹ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದೆ ವಿನಾಕಾರಣ ನಮ್ಮ ತಂದೆಯವರ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ನಮ್ಮ ತಂದೆ ತಪ್ಪು ಮಾಡಿಲ್ಲ ಎಂದು ನಮ್ಮ ತಾಯಿಗೂ ಗೊತ್ತು: ಯತೀಂದ್ರ ಸಿದ್ದರಾಮಯ್ಯ
ಮುಡಾ ವಿಚಾರದಲ್ಲಿ ತಪ್ಪು ಇಲ್ಲದಿರುವಾಗ ನಮ್ಮ ತಂದೆಯವರು ಯಾಕೆ ರಾಜೀನಾಮೆ ಕೊಡಬೇಕು? ಹೀಗೆ ಸಿಕ್ಕ ಸಿಕ್ಕ ಆರೋಪಗಳಿಗೆಲ್ಲ ರಾಜೀನಾಮೆ ಕೊಡುತ್ತಾ ಹೋದರೆ ಅದರ ಅರ್ಥ ಇದ್ಯಾ? ಎಂದು ಪ್ರಶ್ನಿಸಿದರು ಇದೇ ವೇಳೆ ಗುತ್ತಿಗೆದಾರರಿಗೆ ಬೆದರಿಕೆ, ಜಾತಿ ನಿಂದನೆ, ಮಹಿಳಾ ನಿಂದನೆ ಆರೋಪದಲ್ಲಿ ಬಂಧಿತನಾಗಿರುವ ಬಿಜೆಪಿ ಶಾಸಕ ಮುನಿರತ್ನ ಕುರಿತು ಕೇಳಿದ ಪ್ರಶ್ನೆಗೆ. ಅವರ ಬಗ್ಗೆ ನನಗೆ ಅಷ್ಟಾಗಿ ಗೊತ್ತಿಲ್ಲ ಎನ್ನುವ ಮೂಲಕ ಪ್ರತಿಕ್ರಿಯಿಸಲು ನಿರಾಕರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ