ಸ್ವಚ್ಛ ಕೆರೆಗೆ ಕೊಳಚೆ ನೀರು: ಕೊನೆಗೂ ಬಿತ್ತು ಬ್ರೇಕ್

By Kannadaprabha NewsFirst Published Jan 26, 2020, 8:29 AM IST
Highlights

ಸ್ವಚ್ಛಪಡಿಸಲಾಗಿದ್ದ ಕೆರೆಗೆ ಹರಿಯುತ್ತಿದ್ದ ಒಳಚರಂಡಿ ನೀರನ್ನು ನಿಲ್ಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್‌ ಸಮೀಪ ಸುಮಾರು 22 ಎಕರೆಯಲ್ಲಿ ಬಿಬಿಎಂಪಿಯ ಚುಂಚಘಟ್ಟಕೆರೆಗೆ ಹರಿಸಲಾಗುತ್ತಿದ್ದ ಕೊಳಚೆ ನೀರನ್ನು ನಿಲ್ಲಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು(ಜ.26): ಕುಮಾರಸ್ವಾಮಿ ಲೇಔಟ್‌ ಸಮೀಪ ಸುಮಾರು 22 ಎಕರೆಯಲ್ಲಿ ಬಿಬಿಎಂಪಿಯ ಚುಂಚಘಟ್ಟಕೆರೆಗೆ ಹರಿಸಲಾಗುತ್ತಿದ್ದ ಕೊಳಚೆ ನೀರನ್ನು ನಿಲ್ಲಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಕೆರೆಗೆ ಕೊಳಚೆ ನೀರು ಹರಿಯ ಬಿಟ್ಟಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಇಬ್ಬರು ಅಧಿಕಾರಿಗಳ ವಿರುದ್ಧ ಬಿಬಿಎಂಪಿ ಕೋಣನಕುಂಟೆ ಪೊಲೀಸ್‌ ಠಾಣೆಗೆ ದೂರು ನೀಡಿತ್ತು. ಈ ಕುರಿತು ಶುಕ್ರವಾರ ವರದಿ ಪ್ರಕಟಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಜಲಮಂಡಳಿ ಅಧಿಕಾರಿಗಳು ಕೆರೆಗೆ ಹರಿಯುತ್ತಿದ್ದ ಒಳಚರಂಡಿ ನೀರನ್ನು ನಿಲ್ಲಿಸಿದೆ.

ಮತ್ತೆ ವಕೀಲಿಕೆ ಆರಂಭಿಸ್ತಾರಾ ಮಾಜಿ ಸಿಎಂ ಸಿದ್ದರಾಮಯ್ಯ?

ಈ ಕುರಿತು ಪ್ರತಿಕ್ರಿಯೆ ನೀಡಿದ ಜಲಮಂಡಳಿಯ ಎಂಜಿನಿಯರ್‌ ಶ್ರೀನಿವಾಸ್‌, ಕೆರೆಯ ಬಳಿಯ ಕೊಳಚೆ ನೀರು ಹರಿಯುವ ಕೊಳವೆ ಮಾರ್ಗ ಬ್ಲಾಕ್‌ ಆಗಿತ್ತು. ಅದನ್ನು ಸರಿ ಪಡಿಸಿ ಕೊಳಚೆ ನೀರನ್ನು ಕೊಳವೆ ಮೂಲಕ ಹರಿಸಲಾಗುತ್ತಿದೆ. ಕೆರೆಗೆ ಹರಿಯುತ್ತಿದ್ದ ಕೊಳಚೆ ನೀರನ್ನು ನಿಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಕೆರೆ ವಿಭಾಗದ ಮುಖ್ಯಎಂಜಿನಿಯರ್‌ ಮೋಹನ್‌ ಕೃಷ್ಣ, ಕಳೆದ ಆಗಸ್ಟ್‌ನಲ್ಲಿ ಚುಂಚಘಟ್ಟಕೆರೆ ಅಭಿವೃದ್ಧಿಪಡಿಸಲಾಗಿತ್ತು. ಕಳೆದ ನವೆಂಬರ್‌ನಿಂದ ಜಲಮಂಡಳಿಯ ಕೊಳಚೆ ನೀರನ್ನು ಕೆರೆಗೆ ಹರಿಯದಂತೆ ಕ್ರಮ ಕೈಗೊಳ್ಳುವಂತೆ ಜಲಮಂಡಳಿ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಜಲಮಂಡಳಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪೋನ್‌ ಮಾಡಿದರೂ ಜಲಮಂಡಳಿ ಅಧಿಕಾರಿಗಳು ಸ್ವೀಕರಿಸುತ್ತಿರಲಿಲ್ಲ. ಅನಿವಾಯವಾಗಿ ಪೊಲೀಸ್‌ ದೂರು ನೀಡಬೇಕಾಯಿತು. ಇದೀಗ ಕೆರೆಗೆ ಹರಿಯುತ್ತಿದ್ದ ನೀರನ್ನು ನಿಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಉದ್ದಿಮೆ ಪರವಾನಗಿಗಾಗಿ ಇನ್ನು ಕಚೇರಿಗೆ ಅಲೆಯಬೇಕಿಲ್ಲ..!

click me!