ಡ್ರಗ್ಸ್‌ ಕೇಸ್‌: ಮಾಜಿ ಮಂತ್ರಿ ಪುತ್ರ ಎನ್‌ಸಿಬಿ ವಶಕ್ಕೆ

Kannadaprabha News   | Asianet News
Published : Nov 19, 2020, 07:16 AM ISTUpdated : Nov 19, 2020, 07:29 AM IST
ಡ್ರಗ್ಸ್‌ ಕೇಸ್‌:  ಮಾಜಿ ಮಂತ್ರಿ ಪುತ್ರ ಎನ್‌ಸಿಬಿ ವಶಕ್ಕೆ

ಸಾರಾಂಶ

ಮಾಜಿ ಸಚಿವರೋರ್ವರ ಪುತ್ರನನ್ನು ಡ್ರಗ್ಸ್ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ವಶಕ್ಕೆ ಪಡೆದುಕೊಂಡಿದೆ

ಬೆಂಗಳೂರು (ನ.19): ಮಾದಕ ದ್ರವ್ಯ ಜಾಲದ ಸಂಪರ್ಕ ಹೊಂದಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕೇರಳದ ಮಾಜಿ ಸಚಿವರ ಪುತ್ರ ಬಿನೀಶ್‌ ಕೊಡಿಯೇರಿಯನ್ನು ನ.20ರವರೆಗೆ ಬೆಂಗಳೂರು ವಲಯದ ರಾಷ್ಟ್ರೀಯ ಮಾದಕ ದ್ರವ್ಯ ನಿಗ್ರಹ ದಳದ (ಎನ್‌ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 

ಬಿನೀಶ್‌ ಡ್ರಗ್ಸ್‌ ಪೆಡ್ಲರ್‌ಗಳೊಂದಿಗೆ ಕೊಟ್ಯಂತರ ರು.ಗಳ ವ್ಯವಹಾರ ನಡೆಸಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಬೇಕಾಗಿದೆ. ಹೀಗಾಗಿ ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಎನ್‌ಸಿಬಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿರುವ ನಗರದ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಮೂರು ದಿನಗಳ ಕಾಲ ಬಿನೀಶ್‌ನನ್ನು ಎನ್‌ಸಿಬಿ ವಶಕ್ಕೆ ನೀಡಿ ಅದೇಶಿಸಿದ್ದಾರೆ. ಬಿನೀಶ್‌ಗೆ ಸೇರಿದ ಹಣ ಡ್ರಗ್ಸ್‌ ವ್ಯವಹಾರಕ್ಕೆ ಬಳಕೆಯಾದ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಪುತ್ರ ಬಿನೀಶ್‌ ಜೈಲುಪಾಲು ಬೆನ್ನಲ್ಲೇ ಹುದ್ದೆ ತೊರೆದ ಕೊಡಿಯೇರಿ! .
 
ಆರೋಪಿ ಬಿನೀಶ್‌ ಡ್ರಗ್ಸ್‌ ಪೆಡ್ಲರ್‌ ಮೊಹಮದ್‌ ಅನೂಪ್‌ನೊಂದಿಗೆ ಒಟನಾಟ ಹೊಂದಿದ್ದು, ಅನೂಪ್‌ ಬ್ಯಾಂಕ್‌ ಖಾತೆಗೆ ಕೋಟ್ಯಂತರ ರು.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಇದೀಗ

ಅಲ್ಲದೆ, ಈ ಹಿಂದೆ ಎನ್‌ಸಿಬಿ ಅಧಿಕಾರಿಗಳು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಭೇಟಿ ನೀಡಿ ಬಿನೀಶ್‌ ವ್ಯವಹಾರಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ