ಗುಟ್ಕಾ ಪ್ಯಾಕೆಟ್‌ನಲ್ಲಿ ಡ್ರಗ್ಸ್‌: ಅಗತ್ಯಬಿದ್ದರೆ ಸುಗ್ರೀವಾಜ್ಞೆ ತಂದು ನಿಷೇಧ ಎಂದ ಸಿಎಂ

Kannadaprabha News   | Asianet News
Published : Aug 01, 2020, 07:14 AM ISTUpdated : Aug 01, 2020, 08:35 AM IST
ಗುಟ್ಕಾ ಪ್ಯಾಕೆಟ್‌ನಲ್ಲಿ ಡ್ರಗ್ಸ್‌:  ಅಗತ್ಯಬಿದ್ದರೆ ಸುಗ್ರೀವಾಜ್ಞೆ ತಂದು ನಿಷೇಧ ಎಂದ ಸಿಎಂ

ಸಾರಾಂಶ

ಗುಟ್ಕಾ, ಪಾನ್‌ ಮಸಾಲ ಪ್ಯಾಕೆಟ್‌ಗಳಲ್ಲಿ ಮಾದಕ ದ್ರವ್ಯ (ಡ್ರಗ್ಸ್‌) ಮಾರಾಟ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಈ ಪದಾರ್ಥಗಳ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.  

ಬೆಂಗಳೂರು(ಆ.01): ಗುಟ್ಕಾ, ಪಾನ್‌ ಮಸಾಲ ಪ್ಯಾಕೆಟ್‌ಗಳಲ್ಲಿ ಮಾದಕ ದ್ರವ್ಯ (ಡ್ರಗ್ಸ್‌) ಮಾರಾಟ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಈ ಪದಾರ್ಥಗಳ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಶುಕ್ರವಾರ ತಮ್ಮನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲರು ಈ ಸಲಹೆ ನೀಡಿದರು.

ಸಿಪಿ ಯೋಗೇಶ್ವರ್ ವಿಡಿಯೋ ಬಾಂಬ್: ಕೊನೆಗೂ ವೈರಲ್ ಆಯ್ತು ಡಿಕೆಶಿ ವಿಡಿಯೋ

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಕಂಡುಬಂದರೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ತಿಳಿಸಿದರು ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.

ರಾಜ್ಯದಲ್ಲಿ ಗುಟ್ಕಾ, ಪಾನ್‌ ಮಸಾಲಾ ಹಾಗೂ ತಂಬಾಕು ಪ್ಯಾಕೆಟ್‌ಗಳಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ರಾಜ್ಯಪಾಲರು, ಇದರಿಂದಾಗಿ ಯುವಕರು ಹಾಗೂ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಅವರ ಜೀವನಕ್ಕೆ ತೊಂದರೆ ಉಂಟಾಗುತ್ತಿರುವುದರಿಂದ ಈ ಪದಾರ್ಥಗಳ ಮಾರಾಟ ಮತ್ತು ವಿತರಣೆ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಕಣ್ಣಿಟ್ಟಿದ್ದೇ ಬೇರೆ, ಸಿಕ್ಕಿದೆ ಬೇರೆ: ಕೊನೆಗೆ ಸಿಕ್ಕದ್ದೇ ಶಿವಾ ಅಂತ ತಂದೆ ಆಶೀರ್ವಾದ ಪಡೆದ ವಿಜಯೇಂದ್ರ

ರಾಜಭವನದಿಂದ ವಾಪಸಾದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಮುಂದಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!