ಕೋರ್ಟ್ ಬದಲು ಆನ್‌ಲೈನ್‌ನಲ್ಲೇ ‘ಡ್ರಂಕ್‌ ಅಂಡ್‌ ಡ್ರೈವ್‌’ ವಿಚಾರಣೆ, ದಂಡ ಕಟ್ಟಿ ವಾಹನ ಬಿಡಿಸಿಕೊಳ್ಳಿ

Published : Feb 21, 2024, 03:09 PM IST
ಕೋರ್ಟ್ ಬದಲು ಆನ್‌ಲೈನ್‌ನಲ್ಲೇ  ‘ಡ್ರಂಕ್‌ ಅಂಡ್‌ ಡ್ರೈವ್‌’ ವಿಚಾರಣೆ, ದಂಡ ಕಟ್ಟಿ ವಾಹನ ಬಿಡಿಸಿಕೊಳ್ಳಿ

ಸಾರಾಂಶ

ರಾಜ್ಯ ತರಬೇತಿ, ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ವಾಹನ ಚಾಲಕರು ಆನ್‌ಲೈನ್‌ ವಿಡಿಯೋ ಕಾನ್ಫರೆನ್ಸ್‌ ಮುಖಾಂತರ ವಿಚಾರಣೆ ಎದುರಿಸಿ ದಂಡ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದೆ.

ಮೋಹನ ಹಂಡ್ರಂಗಿ

ಬೆಂಗಳೂರು (ಫೆ.21): ಪಾನಮತ್ತ ಚಾಲನೆ (ಡ್ರಂಕ್‌ ಅಂಡ್‌ ಡ್ರೈವ್‌) ಪ್ರಕರಣಗಳಲ್ಲಿ ವಾಹನದ ಚಾಲಕರು ದಂಡ ಪಾವತಿಸಲು ಇನ್ನು ಮುಂದೆ ನ್ಯಾಯಾಲಯಕ್ಕೆ ಓಡಾಡುವ ಅಗತ್ಯವಿಲ್ಲ. ಏಕೆಂದರೆ, ರಾಜ್ಯ ತರಬೇತಿ, ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ವಾಹನ ಚಾಲಕರು ಆನ್‌ಲೈನ್‌ ವಿಡಿಯೋ ಕಾನ್ಫರೆನ್ಸ್‌ ಮುಖಾಂತರ ವಿಚಾರಣೆ ಎದುರಿಸಿ ದಂಡ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದೆ.

ಮೊದಲಿಗೆ ರಾಜ್ಯದ ಮೈಸೂರು ಮತ್ತು ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ಈ ಎರಡೂ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹೊಸ ವ್ಯವಸ್ಥೆಯ ಸಾಧಕ-ಬಾಧಕ ಪರಿಶೀಲಿಸಿ ಬಳಿಕ ರಾಜ್ಯದ ಉಳಿದ ಮಹಾನಗರ ಪಾಲಿಕೆ ಹಾಗೂ ಜಿಲ್ಲೆಗಳಿಗೂ ವಿಸ್ತರಿಸಲು ತೀರ್ಮಾನಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಪ್ರಾಯೋಗಿಕವಾಗಿ ವ್ಯವಸ್ಥೆ ಜಾರಿಯಾಗಲಿದೆ.

ಡಿಕೆಶಿ ಗಡ್ಡದ ಮೇಲೆ ಅಶೋಕ್‌ ಕಣ್ಣು , ಕೃಷ್ಣ ಬೈರೇಗೌಡ ಉತ್ತರಕ್ಕೆ ನಗೆಗಡಲಲ್ಲಿ ತೇಲಿದ ಸದನ

ಪ್ರಸ್ತುತ ವ್ಯವಸ್ಥೆ ಹೇಗಿದೆ?: ಪ್ರಸ್ತುತ ಪಾನಮತ್ತ ಚಾಲನೆ ಪ್ರಕರಣಗಳಲ್ಲಿ ಸಂಚಾರ ಪೊಲೀಸರು ವಾಹನವನ್ನು ಜಪ್ತಿ ಮಾಡಿ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತಿದ್ದಾರೆ. ಬಳಿಕ ವಾಹನದ ಚಾಲಕ ಪೊಲೀಸ್‌ ಠಾಣೆಗೆ ಬಂದು ದಂಡ ಪಾವತಿಸಿ ವಾಹನವನ್ನು ಬಿಡಿಸಿಕೊಂಡು ಹೋಗಬಹುದಾಗಿದೆ. ಕೆಲ ಪಾನಮತ್ತ ಚಾಲನೆ ಪ್ರಕರಣಗಳಲ್ಲಿ ದಂಡ ಪಾವತಿ ವಿಳಂಬವಾದರೆ, ನ್ಯಾಯಾಲಯಕ್ಕೆ ತೆರಳಿ ದಂಡ ಪಾವತಿಸಬೇಕು. ಅಲ್ಲಿ ವಕೀಲರನ್ನು ನೇಮಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗಿ ಖುದ್ದು ವಿಚಾರಣೆ ಎದುರಿಸಿ ದಂಡ ಪಾವತಿಸಬೇಕು. ಬಳಿಕ ದಂಡ ಪಾವತಿಯ ರಶೀದಿ ಪಡೆದು ಸಂಬಂಧಪಟ್ಟ ಸಂಚಾರ ಪೊಲೀಸ್‌ ಠಾಣೆಗೆ ಬಂದು ರಶೀದಿ ಹಾಜರುಪಡಿಸಿ ನಂತರ ತಮ್ಮ ವಾಹನವನ್ನು ಬಿಡಿಸಿಕೊಂಡು ಹೋಗಬೇಕಿದೆ.

ಸಮಯ ಉಳಿತಾಯ-ಶೀಘ್ರ ಇತ್ಯರ್ಥ: ವಾಹನ ಚಾಲಕರು ನ್ಯಾಯಾಲಯಕ್ಕೆ ತೆರಳಿ ವಕೀಲರನ್ನು ನೇಮಿಸಿಕೊಂಡು ಖುದ್ದು ವಿಚಾರಣೆ ಹಾಜರಾಗಿ ದಂಡ ಪಾವತಿಸುವ ಪ್ರಕ್ರಿಯೆಗೆ ಸಾಕಷ್ಟು ಸಮಯ ವ್ಯಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮಯ ಉಳಿಸುವ ಹಾಗೂ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಆನ್‌ಲೈನ್‌ನಲ್ಲೇ ವಿಚಾರಣೆ ಎದುರಿಸಿ, ಆನ್‌ಲೈನ್‌ನಲ್ಲೇ ದಂಡ ಪಾವತಿಸುವ ವ್ಯವಸ್ಥೆ ಜಾರಿಗೆ ಮುಂದಾಗಲಾಗಿದೆ. ಈ ಹೊಸ ವ್ಯವಸ್ಥೆಗೆ ಸಂಬಂಧಪಟ್ಟ ನ್ಯಾಯಾಲಯಗಳು ಸಹ ಒಪ್ಪಿಗೆ ಸೂಚಿಸಿವೆ ಎಂದು ತಿಳಿದು ಬಂದಿದೆ.

ಕಾರ್ಖಾನೆ ಮಾಲಿನ್ಯದಿಂದ ಕೊಪ್ಪಳ ಯುವಕರಿಗೆ ವಧು ಸಿಗುತ್ತಿಲ್ಲ, ಎಂಎಲ್ಸಿ ಹೇಮಲತಾ ಗಂಭೀರ ಆರೋಪ

ವಿಡಿಯೋ ಕಾನ್ಫರೆನ್ಸ್‌ನಲ್ಲಿ ವಿಚಾರಣೆ: ಪಾನಮತ್ತ ಚಾಲನೆ ಪ್ರಕರಣ ದಾಖಲಾದ ಬಳಿಕ ಚಾಲಕರ ಮೊಬೈಲ್‌ಗೆ ಸಂದೇಶವೊಂದು ಬರಲಿದೆ. ಆ ಸಂದೇಶದಲ್ಲಿನ ಲಿಂಕ್‌ ತೆರೆದರೆ, ವಿಚಾರಣೆ ದಿನಾಂಕ ಹಾಗೂ ಸಮಯದ ಮಾಹಿತಿ ಇರಲಿದೆ. ಚಾಲಕರು ನಿಗದಿತ ಸಮಯಕ್ಕೆ ಆ ಲಿಂಕ್‌ ತೆರೆದು ಆನ್‌ಲೈನ್‌ನಲ್ಲಿ ವಿಡಿಯೋ ಕಾನ್ಫರೆನ್ಸ್‌ ಮುಖಾಂತರ ವಿಚಾರಣೆಗೆ ಹಾಜರಾಗಿ ನ್ಯಾಯಾಧೀಶರ ಆದೇಶದ ಅನುಸಾರ ದಂಡ ಪಾವತಿಸಬೇಕು. ಈ ದಂಡವನ್ನು ಆನ್‌ಲೈನ್‌ನಲ್ಲೇ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಚಾಲಕರು ತಾವು ಇರುವ ಜಾಗದಿಂದಲೇ ವಿಡಿಯೋ ಕಾನ್ಫರೆನ್ಸ್‌ ಮುಖಾಂತರ ವಿಚಾರಣೆ ಎದುರಿಸಿ, ದಂಡ ಪಾವತಿಸಿ ತ್ವರಿತಗತಿಯಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್