ಬೋಯಿಂಗ್‌ ಉದ್ಘಾಟನೆ ವೇಳೆ  ಅರ್ಧಕ್ಕೆ ಭಾಷಣ ನಿಲ್ಲಿಸಿದ ಸಿಎಂ! ಕಾರಣ ಇಲ್ಲಿದೆ

Published : Jan 20, 2024, 06:45 AM IST
ಬೋಯಿಂಗ್‌ ಉದ್ಘಾಟನೆ ವೇಳೆ  ಅರ್ಧಕ್ಕೆ ಭಾಷಣ ನಿಲ್ಲಿಸಿದ ಸಿಎಂ! ಕಾರಣ ಇಲ್ಲಿದೆ

ಸಾರಾಂಶ

ಬೋಯಿಂಗ್‌ನ ನೂತನ ಕ್ಯಾಂಪಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಇಂಗ್ಲಿಷ್‌ನಲ್ಲಿದ್ದ ಭಾಷಣ ಮಾಡುವ ವೇಳೆ ಎಲ್ಲಾ ಪುಟಗಳು ಇಲ್ಲದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

ಬೆಂಗಳೂರು (ಜ.20): ಬೋಯಿಂಗ್‌ನ ನೂತನ ಕ್ಯಾಂಪಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಇಂಗ್ಲಿಷ್‌ನಲ್ಲಿದ್ದ ಭಾಷಣ ಮಾಡುವ ವೇಳೆ ಎಲ್ಲಾ ಪುಟಗಳು ಇಲ್ಲದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಮೂರು ಪುಟಗಳ ಭಾಷಣವನ್ನು ಮಾಡುತ್ತಿದ್ದರು. ಒಂದು ಪುಟ ಮುಗಿಸಿದ ಬಳಿಕ ಮುಂದಿನ ಪುಟಕ್ಕೆ ತಿರುವಿದರು. ಆದರೆ, ಭಾಷಣದ ಮುಂದಿನ ಪ್ರತಿಗಳು ಇರಲಿಲ್ಲ. ಹೀಗಾಗಿ ‘ಇಲ್ಲಿಗೆ ನನ್ನ ಮಾತುಗಳನ್ನು ಮುಗಿಸುತ್ತೇನೆ. ಜೈ ಹಿಂದ್, ಜೈ ಕರ್ನಾಟಕ’ ಎಂದು ಹೇಳಿ ಭಾಷಣ ಮುಗಿಸಿದರು.

ಪ್ರಧಾನಿ ಮೋದಿ ಕಲಬುರಗಿಗೆ ಬಂದ್ರೂ ಸ್ವಾಗತಕ್ಕೆ ಬಾರದ ಪ್ರಿಯಾಂಕ್ ಖರ್ಗೆ!

ಮೋದಿ ಮೋದಿ ಕೂಗು, ಸಿದ್ದುರತ್ತ ಮೋದಿ ನೋಟ

ಪ್ರಧಾನಿ ಮೋದಿಯವರ ಭಾಷಣದ ನಡುವೆ ನೆರೆದಿದ್ದ ಜನರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಡೆ ನೋಡಿದ ಪ್ರಧಾನಿಯವರು, ‘ಮುಖ್ಯಮಂತ್ರಿಗಳೇ, ಆಗಾಗ ಈ ರೀತಿ ಆಗುತ್ತಿರುತ್ತದೆ’ ಎಂದು ಹಾಸ್ಯಭರಿತವಾಗಿ ಮಾತನಾಡಿ ತಮ್ಮ ಭಾಷಣ ಮುಂದುವರೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!