ನಮ್ಮನೆ ಬೋರ್‌ವೆಲ್‌ನಲ್ಲೂ ನೀರಿಲ್ಲ, ಬೇರೆಡೆಯಿಂದ ತರಿಸ್ತಿದ್ದೀವಿ: ಡಿಸಿಎಂ ಡಿ.ಕೆ. ಶಿವಕುಮಾರ್

Published : Mar 09, 2024, 01:47 PM ISTUpdated : Mar 09, 2024, 02:21 PM IST
ನಮ್ಮನೆ ಬೋರ್‌ವೆಲ್‌ನಲ್ಲೂ ನೀರಿಲ್ಲ, ಬೇರೆಡೆಯಿಂದ ತರಿಸ್ತಿದ್ದೀವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಸಾರಾಂಶ

ನಮ್ಮ ಮನೆಯ ಬೋರ್‌ವೆಲ್‌ನಲ್ಲೂ ನೀರಿಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು (ಮಾ.09): ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ನೀರಿನ ಸಮಸ್ಯೆಯಾದಾಗ ಚರಿತ್ರೆಯಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಾಟರ್ ಟ್ಯಾಂಕರ್‌ಗಳ ಮಾಫಿಯಾಕ್ಕೆ ಕಡಿವಾಣ ಹಾಕಿದವರು ನಾವಾಗಿದ್ದೇವೆ. ಆದರೆ, ಏನು ಮಾಡೋದು ನಮ್ಮ ಮನೆಯ ಬೋರ್‌ವೆಲ್‌ನಲ್ಲೂ ನೀರಿಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷದವರಿಗೆ ಟೀಕೆ ಮಾಡೋದು ಬಿಟ್ಟರೆ ಬೇರೆನೂ ಇಲ್ಲ. ಸಲಹೆ ಕೊಟ್ಟರೆ ನಾವು ಸ್ವೀಕಾರ ಮಾಡ್ತೀವಿ. ಬೆಂಗಳೂರಿನ ಚರಿತ್ರೆಯಲ್ಲೇ ಟ್ಯಾಂಕರ್ ಕಂಟ್ರೋಲ್ ಮಾಡಿರೋದು ನಾವು. ಈ ದಂಧೆಗೆ ಕಡಿವಾಣ ಹಾಕಿರೋದು ನಾವು. ಅವರಿಗೆ ಒಂದು ದರ ಫಿಕ್ಸ್ ಕುರಿತು ಅಧಿಕಾರಿಗಳು ಚರ್ಚೆ ಮಾಡಿದ್ದಾರೆ. ಕಾವೇರಿ ನೀರು ಹೆಚ್ಚಾಗಿ ಬರ್ತಾ ಇದೆ. ಆದರೆ, ಹಾಹಾಕಾರ ಇಲ್ಲ ಅಂತ ನಾವು ಹೇಳ್ತಾ ಇಲ್ಲ ಎಂದು ತಿಳಿಸಿದರು.

ರಾಮೇಶ್ವರಂ ಕೆಫೆ ಬಾಂಬರ್ ಕ್ಲಿಯರ್ ಪಿಕ್ಚರ್ ಬಿಡುಗಡೆ ಮಾಡಿದ ಎನ್‌ಐಎ!

ಇನ್ನು ನಮ್ಮ ಮನೆಯಲ್ಲೂ ಬೋರ್ ವೆಲ್ ನಲ್ಲಿ ನೀರು ಇಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ. ಕಾರು ತೊಳೆಯಲು, ದನ ಕರು ತೊಳೆಯಲು ಬಳಸಬೇಡಿ ಅಂತ ಹೇಳಿದ್ದೇವೆ. ಆರ್‌ಓ ವಾಟರ್ ಎಲ್ಲೆಲ್ಲಿ ಕೆಟ್ಟೋಗಿತ್ತೋ ಅದನ್ನ ಸರಿ ಮಾಡ್ತಾ ಇದ್ದೀವಿ. ಬೆಂಗಳೂರು ಗ್ರಾಮಾಂತರಕ್ಕೆ ಮಾತ್ರ ನೋಡಲ್ ಆಫೀಸರ್ ನೇಮಕ ವಿಚಾರವಾಗಿ ಮಾತನಾಡಿ, ಬೆಂಗಳೂರು ನಗರಕ್ಕೂ ಹಾಕಿದ್ದೇವೆ. ಬೆಂಗಳೂರು ಗ್ರಾಮಾಂತರ ಪೂರ್ತಿ ಬೋರ್ ವೆಲ್ ಗಳು ಇವೆ. ನಗರದಲ್ಲಿ ಕಾವೇರಿ ವಾಟರ್ ಬರುತ್ತದೆ. ಹಾಗಾಗಿ ಅಲ್ಲಿಗೆ ನೋಡಲ್ ಆಫೀಸರ್ ಗಳನ್ನ ಹಾಕಿದ್ದೇವೆ ಅಷ್ಟೆ. ಇನ್ನು ಬಿಜೆಪಿಯವರು ಪ್ರತಿಭಟನೆ ಮಾಡ್ತಾರೆ, ಮಾಡಲಿ ಬಿಡಿ. ಅವರನ್ಯಾರು ತಡೆಯಲ್ಲ ಎಂದು ಹೇಳಿದರು.

ರಾಜ್ಯದ ರಾಕರಾಣದಿಂದ ಬಹಳ ನೋವಾಗುತ್ತಿದೆ. ಕುಮಾರಸ್ವಾಮಿ ಅವರನ್ನ ಅಧಿಕಾರದಿಂದ ಇಳಿಸಿದವರೂ ಈಗ ಜೊತೆ ಸೇರಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಿ.ಪಿ.ಯೋಗೇಶ್ವರ್ ಅವರೆಲ್ಲಾ ಕುಮಾರಸ್ವಾಮಿ ಅಧಿಕಾರದಿಂದ ಇಳಿಯಲಿ ಕಾರಣವಾಗಿದ್ದಾರೆ. ಈಗ ಮತ್ತೆ ಅವರ ಜೊತೆಗೆ ಇವರು ಸೇರಿದ್ದಾರೆ. ಮತ್ತೆ ಅವರ ಜೊತೆಗೆ ಸೇರಿರೋದು ನೋವಾಗುತ್ತಿದೆ. ದಳದವರಿಗೂ ಬಿಜೆಪಿಯವರಿಗೂ ಕೇಳ್ತಾ ಇದ್ದೀನಿ. ರಾಜಕೀಯದ ಒಂದು ಸಿದ್ದಾಂತನಾದರೂ ಇರಬೇಕಲ್ಲ. ಕುಮಾರಸ್ವಾಮಿ ಹೇಗೆ ಇದನ್ನ ಜೀರ್ಣ ಮಾಡ್ತಾ ಇದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಮಾ.10ರ ಬೆಳಗ್ಗೆ 6 ಗಂಟೆಗೆ ಮೆಟ್ರೋ ಸಂಚಾರ ಆರಂಭ

ಮೈಸೂರು ಬಿಜೆಪಿ ಅಭ್ಯರ್ಥಿ ಬದಲಾಬಣೆ ವಿಚಾರದ ಬಗ್ಗೆ ಮಾತನಾಡಿ, ಯಾರ ಹೆಸರಾದರು ಶಿಫಾರಸ್ಸು ಮಾಡಲಿ. ಯಾರ ಹೆಸರು ಶಿಫಾರಸ್ಸು ಮಾಡಿದರು ನಾವು ಸಿದ್ದಾಂತದ ಮೇಲೆ ಕೆಲಸ ಮಾಡುತ್ತೇವೆ. ಅವರ ನಿರ್ಧಾರಕ್ಕೆಲ್ಲಾ ತಲೆ ಕೆಡಿಸಿಕೊಳ್ಳಲ್ಲ. ನಮ್ಮದು ಸಿದ್ದಾಂತ ಪಾರ್ಟಿಯಾಗಿದೆ. ಜನರಿಗೆ ಹತ್ತಿರವಾದ ಕ್ಯಾಂಡಿಡೇಟ್ ಹಾಕ್ತೀವಿ ಚುನಾವಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Karnataka News Live: ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್