ವಿಜಯಪುರದ ಸಿಂದಗಿಯಲ್ಲಿ ಒಂದೇ ದಿನ ಐದು ಬಾರಿ ಕಂಪಿಸಿದ ಭೂಮಿ, ಜನರಲ್ಲಿ ಆತಂಕ!

Published : Sep 18, 2025, 11:22 PM ISTUpdated : Sep 18, 2025, 11:36 PM IST
Earthquake Vijayapur Earthquake

ಸಾರಾಂಶ

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಒಂದೇ ದಿನ ಐದು ಬಾರಿ ಭೂಕಂಪನ ಸಂಭವಿಸಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜೋರಾದ ಶಬ್ದದೊಂದಿಗೆ ಭೂಮಿ ಕಂಪಿಸಿದ್ದರಿಂದ ಭಯಭೀತರಾದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. 

ವಿಜಯಪುರ (ಸೆ.18): ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ (ಸೆಪ್ಟೆಂಬರ್ 18, 2025) ಒಂದೇ ದಿನದಲ್ಲಿ ಐದು ಬಾರಿ ಭೂಕಂಪನದ ಅನುಭವವಾಗಿದೆ. ಮಧ್ಯಾಹ್ನ 3 ಗಂಟೆ, ರಾತ್ರಿ 10 ಗಂಟೆ 11 ನಿಮಿಷ, 10 ಗಂಟೆ 25 ನಿಮಿಷ, 10 ಗಂಟೆ 47 ನಿಮಿಷ ಮತ್ತು ಇನ್ನೊಮ್ಮೆ ರಾತ್ರಿಯ ವೇಳೆಯಲ್ಲಿ ಜೋರಾದ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಈ ಘಟನೆಯಿಂದ ಸಿಂದಗಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮನೆಮಾಡಿದೆ.

ಮನೆಗಳಿಂದ ಹೊರಗೆ ಓಡಿ ಬಂದ ಜನರು:

ಭೂಕಂಪನದ ಅನುಭವ ಆಗುತ್ತಿದ್ದಂತೆ ಸ್ಥಳೀಯರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿಬಂದಿದ್ದು, ಭೂಕಂಪನದ ತೀವ್ರತೆಯ ಬಗ್ಗೆ ತಕ್ಷಣವೇ ಮಾಹಿತಿ ಲಭ್ಯವಾಗಿಲ್ಲವಾದರೂ, ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯ ವರದಿಗಳು ಇದುವರೆಗೆ ಬಂದಿಲ್ಲ. ಅಧಿಕಾರಿಗಳು ಸ್ಥಿತಿಗತಿಯನ್ನು ಗಮನಿಸುತ್ತಿದ್ದು, ಜನರಿಗೆ ಶಾಂತವಾಗಿರಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಿದ್ದಾರೆ.

ಹಿಂದೆಯೂ ಹಲವು ಬಾರಿ ಭೂಕಂಪನ:

ಕಳೆದ ಎರಡು ವರ್ಷಗಳ ಹಿಂದೆಯೂ ವಿಜಯಪುರ ಜಿಲ್ಲೆಯಲ್ಲಿ ಸರಣಿ ರೂಪದಲ್ಲಿ ಭೂಕಂಪನಗಳು ಸಂಭವಿಸಿದ್ದವು, ಇದರಿಂದ ಸ್ಥಳೀಯರು ಆತಂಕಗೊಂಡಿದ್ದರು. ಕೆಲವು ಕುಟುಂಬಗಳು ಊರು ಬಿಟ್ಟು ಬೇರೆಡೆ ತೆರಳಿದ್ದರು. 2023 ರಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಂಪನಗಳು ಕಂಡುಬಂದಿದ್ದವು, ಆದರೆ ಗಮನಾರ್ಹ ಹಾನಿಯಾಗಿರಲಿಲ್ಲ. ಈಗ ಮತ್ತೆ ಸಿಂದಗಿಯಲ್ಲಿ ಒಂದೇ ದಿನದಲ್ಲಿ ಐದು ಬಾರಿ ಭೂಮಿ ಕಂಪಿಸಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌