ರಾಜ್ಯದ ಕೆಲವೆಡೆ ಕಂಪಿಸಿದ ಭೂಮಿ

Published : Nov 13, 2018, 12:03 PM IST
ರಾಜ್ಯದ ಕೆಲವೆಡೆ ಕಂಪಿಸಿದ ಭೂಮಿ

ಸಾರಾಂಶ

ನಗರದ ಹೊಸದುರ್ಗ ತಾಲೂಕಿನಲ್ಲೂ ಇಂತಹದ್ದೇ ಮತ್ತೊಂದು ಘಟನೆ ಸಂಭವಿಸಿದ್ದು, ಕಂಚೀಪುರದಲ್ಲಿ ಭಾರೀ ಶಬ್ದದೊಂದಿಗೆ ಕ್ಷಣಕಾಲ ಭೂಮಿ ಕಂಪಿಸಿದ ಅನುಭವ ಆಗಿದೆ. ಕಳೆದ 2 ವರ್ಷಗಳ ಹಿಂದೆಯೂ ಕಂಚೀಪುರ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿತ್ತು. 

ಚಿತ್ರದುರ್ಗ[ನ.13]: ರಾಜ್ಯದಲ್ಲಿ ಮತ್ತೊಮ್ಮೆ ಜನರಿಗೆ ಲಘು ಭೂಕಂಪದ ಅನುಭವ ಆಗಿದೆ. ಕೆಲ ತಿಂಗಳುಗಳ ಹಿಂದೆ ಮಂಡ್ಯದಲ್ಲಿ ಭೂಕಂಪನದ ಅನುಭವ ಆಗಿತ್ತು, ಇದೀಗ ಚಿತ್ರದುರ್ಗದಲ್ಲಿ ಅಂತಹದ್ದೇ ಘಟನೆ ಸಂಭವಿಸಿದೆ.

24 ಗಂಟೆ, 10 ದೇಶ, 157 ಕಡೆ ಭೂಮಿ ಗಢಗಢ..!

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಗುಡ್ಡದನೇರಲೇಕೆರೆ ಗ್ರಾಮದಲ್ಲಿ ಭೂಮಿ ಕಂಪನದ ಅನುಭವ ಆಗಿದೆ. ಭೂಮಿ ಕಂಪನದ ತೀವ್ರತೆ 1.6 ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 10.23ರ ವೇಳೆಗೆ ಭೂಮಿ ಕಂಪಿಸಿದ್ದು, ಸಿಸ್ಮೋಗ್ರಾಫ್ ಮೀಟರ್’ನಲ್ಲಿ ಭೂಮಿ ಕಂಪನದ ಬಗ್ಗೆ ಮಾಹಿತಿ ದಾಖಲಾಗಿದ್ದು, ಲಘು ಭೂಕಂಪವಾಗಿರುವುದನ್ನು   ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳು ಸುವರ್ಣನ್ಯೂಸ್’ಗೆ ಖಚಿತ ಪಡಿಸಿದ್ದಾರೆ.

ಮಂಡ್ಯದಲ್ಲಿ ಭೂಮಿ ಗಡಗಡ; ಸಾರ್ವಜನಿಕರಲ್ಲಿ ಶುರುವಾಯ್ತು ಡವಡವ

ಇನ್ನು ನಗರದ ಹೊಸದುರ್ಗ ತಾಲೂಕಿನಲ್ಲೂ ಇಂತಹದ್ದೇ ಮತ್ತೊಂದು ಘಟನೆ ಸಂಭವಿಸಿದ್ದು, ಕಂಚೀಪುರದಲ್ಲಿ ಭಾರೀ ಶಬ್ದದೊಂದಿಗೆ ಕ್ಷಣಕಾಲ ಭೂಮಿ ಕಂಪಿಸಿದ ಅನುಭವ ಆಗಿದೆ. ಕಳೆದ 2 ವರ್ಷಗಳ ಹಿಂದೆಯೂ ಕಂಚೀಪುರ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿತ್ತು. ಇದೀಗ ಇಲ್ಲಿ ಭೂಮಿ ಕಂಪಿಸಿದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ