ಸಿಎಎ ಗದ್ದಲಕ್ಕೆ ಹಣ ಪೂರೈಕೆ: ಪಿಎಫ್‌ಐಗೆ ಇ.ಡಿ ದಾಳಿ ಬಿಸಿ

Kannadaprabha News   | Asianet News
Published : Dec 04, 2020, 08:08 AM IST
ಸಿಎಎ ಗದ್ದಲಕ್ಕೆ ಹಣ ಪೂರೈಕೆ: ಪಿಎಫ್‌ಐಗೆ ಇ.ಡಿ ದಾಳಿ ಬಿಸಿ

ಸಾರಾಂಶ

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬೆಂಗಳೂರು ಸೇರಿದಂತೆ 26 ಕಡೆ ಏಕಕಾಲಕ್ಕೆ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿದೆ.

  ನವದೆಹಲಿ (ಡಿ.04):  ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿದಂತೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬೆಂಗಳೂರು ಸೇರಿದಂತೆ 26 ಕಡೆ ಏಕಕಾಲಕ್ಕೆ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿದೆ. ತಮಿಳುನಾಡು, ಕರ್ನಾಟಕ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ರಾಜಸ್ಥಾನ, ದೆಹಲಿ, ಕೇರಳದ ವಿವಿಧೆಡೆ ದಾಳಿ ನಡೆದಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಪಿಎಫ್‌ಐನ ಬ್ಯಾಂಕ್‌ ಖಾತೆಗಳಿಗೆ 120 ಕೋಟಿ ರು. ಹಣ ಸಂದಾಯವಾಗಿದ್ದು, ಅದರ ಮೂಲಗಳನ್ನು ಇ.ಡಿ. ಜಾಲಾಡುತ್ತಿದೆ.

ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ವೇಳೆ ನಡೆದ ದಂಗೆಯಲ್ಲಿ ಪಿಎಫ್‌ಐ ಪಾತ್ರವಿದೆ ಮತ್ತು ಆ ದಂಗೆ ನಡೆಸಲು ಪಿಎಫ್‌ಐ-ಭೀಮ್‌ ಆರ್ಮಿ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ನಡೆದಿದೆ ಎಂಬುದೂ ಸೇರಿದಂತೆ ಪಿಎಫ್‌ಐ ವಿರುದ್ಧ ಇರುವ ಹಲವಾರು ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ಇ.ಡಿ. ಒಟ್ಟಿಗೇ ತನಿಖೆ ನಡೆಸುತ್ತಿದೆ. ಆ ತನಿಖೆಗೆ ಸಾಕ್ಷ್ಯ ಕಲೆಹಾಕಲು ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಚಿವ ರೋಷನ್ ಬೇಗ್ ಅರೆಸ್ಟ್

ಪಿಎಫ್‌ಐ ಸಂಘಟನೆಯ ಅಧ್ಯಕ್ಷ ಒ.ಎಂ.ಅಬ್ದುಲ್‌ ಸಲಾಮ್‌ಗೆ ಸೇರಿದ ದೆಹಲಿ ಕಚೇರಿ, ಕೇರಳ ಘಟಕದ ಅಧ್ಯಕ್ಷ ನಾಸಿರುದ್ದೀನ್‌ ಏಳಮರಮ್‌ ಕಚೇರಿ ಹಾಗೂ ಬೆಂಗಳೂರಿನಲ್ಲಿರುವ ಪಿಎಫ್‌ಐ ಕಚೇರಿ ಸೇರಿದಂತೆ 26 ಕಡೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಇ.ಡಿ. ದಾಳಿಗೆ ಆಕ್ರೋಶ ವ್ಯಕ್ತಪಡಿಸಿರುವ ಪಿಎಫ್‌ಐ, ಕೇಂದ್ರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ದೇಶದ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ದಾಳಿ ನಡೆಸಲಾಗಿದೆ ಎಂದು ಹೇಳಿದೆ.

2006ರಲ್ಲಿ ಕೇರಳದಲ್ಲಿ ಆರಂಭವಾದ ಪಿಎಫ್‌ಐ ಸಂಘಟನೆ ದೆಹಲಿಯಲ್ಲಿ ತನ್ನ ಪ್ರಧಾನ ಕಚೇರಿ ಹೊಂದಿದೆ. ಸಿಎಎ-ವಿರೋಧಿ ಪ್ರತಿಭಟನೆ ಮತ್ತು ಆ ವೇಳೆ ನಡೆದ ದಂಗೆಗೆ ಹಣ ಪೂರೈಸಲು ಪಿಎಫ್‌ಐ ಮತ್ತು ಭೀಮ್‌ ಆರ್ಮಿ ನಡುವೆ ಅಕ್ರಮ ಹಣದ ವರ್ಗಾವಣೆ ನಡೆದಿದ್ದು, ಆ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಇ.ಡಿ. ಕಳೆದ ತಿಂಗಳು ಹೇಳಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!