
ಮೈಸೂರು(ಅ.18): ಮುಡಾ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ಇಂದು(ಶುಕ್ರವಾರ) ಬೆಳಗ್ಗೆ 11 ಗಂಟೆಯಿಂದ ನಿರಂತರವಾಗಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳು ಸತತ 12 ಗಂಟೆಯಿಂದ ಪರಿಶೀಲನೆ ನಡೆಸುತ್ತಿದ್ದಾರೆ.
ಇಡಿ ಅಧಿಕಾರಿಗಳು ಮುಡಾ ಅಧ್ಯಕ್ಷರ ಕಚೇರಿಯಲ್ಲೇ ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಊಟ ಮುಗಿಸಿದ್ದಾರೆ. ವೈಟ್ನರ್ ಹಾಕಿರುವ ಮೂಲ ದಾಖಲಾತಿಗಾಗಿ ಅಧಿಕಾರಿಗಳು ಹುಡುಕಾಟ ಮುಂದುವರೆಸಿದ್ದಾರೆ. ಎಷ್ಟೇ ಹುಡುಕಿದರು ವೈಟ್ನರ್ ಮೂಲ ಪ್ರತಿ ಸಿಗುತ್ತಿಲ್ಲ.
ಸಿದ್ದರಾಮಯ್ಯನವರ ಪಾಪದ ಕೊಡ ತುಂಬಿದೆ, ಗೌರವಯುತವಾಗಿ ರಾಜೀನಾಮೆ ಕೊಡಲಿ: ವಿಜಯೇಂದ್ರ
ತಹಸಿಲ್ದಾರ್ ಕಚೇರಿಯಲ್ಲೂ ಪರಿಶೀಲನಾ ಕಾರ್ಯ ಮುಂದುವರೆದಿದೆ. ವೈಟ್ನರ್ ಹಿಂದಿರುವ ಅಕ್ಷರಗಳ ಪತ್ತೆಹಚ್ಚಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ವೈಟ್ನರ್ ಮೂಲ ದಾಖಲಾತಿ ಪತ್ತೆಯಾದ್ರೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ ಗ್ಯಾರಂಟಿ ಎಂದು ಹೇಳಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ