
ಹಾವೇರಿ (ಜೂ.29) ಬಕ್ರಿದ್ ಹಬ್ಬದ ನಮಾಜ್ ಮಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನವರು ಪರಸ್ಪರ ಹೊಡೆದಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದಿದೆ.
ಇಂದು ಬಕ್ರಿದ್ ಹಿನ್ನೆಲೆ ಸಾವಿರಾರು ಜನರಿಂದ ರಟ್ಟಿಹಳ್ಳಿಯ ಈದ್ಗಾ ಮೈದಾನದಲ್ಲಿ ಪ್ರಾರ್ಥನಾ ಮಾಡಲಾಗಿತ್ತು. ಈ ವೇಳೆ ಅಂಜುಮನ್ ಕಮಿಟಿ ಹಣಕಾಸು ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಪರ ವಿರೋಧ ವ್ಯಕ್ತವಾಗಿದೆ ಬಳಿಕ ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಸಾವಿರಾರು ಜನರು ಪ್ರಾರ್ಥನೆಗೆ ಸೇರಿದ್ರಿಂದ ನೂಕುನುಗ್ಗಲು ಏರ್ಪಟ್ಟು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲವರಿಗೆ ಗಾಯಗಳಾಗಿವೆ. ಘಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಗಂಗಾವತಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ: ಮುಸ್ಲಿಂರ ಸಾಮೂಹಿಕ ಪ್ರಾರ್ಥನೆಯಲ್ಲಿ ಜನಾರ್ದನ ರೆಡ್ಡಿ ಭಾಗಿ
ಗಲಾಟೆಯಲ್ಲಿ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ಈದ್-ಉಲ್-ಅಧಾ ದಿನವು ಇಸ್ಲಾಮಿಕ್ ಚಂದ್ರನ ಕ್ಯಾಲೆಂಡರ್ನ ಅಂತಿಮ (ಹನ್ನೆರಡನೇ) ತಿಂಗಳ ಹತ್ತನೇ ದಿನದಂದು ಬರುತ್ತದೆ; ಧು-ಅಲ್-ಹಿಜ್ಜಾ. ಇದನ್ನು ಆಚರಿಸುವ ದಿನವು ಚಂದ್ರನ ವೀಕ್ಷಣೆಯ ಮೇಲೆ ಅವಲಂಬಿತವಾಗಿದೆ. ಈದ್ ಅಥವಾ ರಂಜಾನ್ ಈದ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈದ್ ಅಲ್-ಫಿತರ್, ಪವಿತ್ರ ರಂಜಾನ್ ತಿಂಗಳ ಅಂತ್ಯವನ್ನು ಸೂಚಿಸುತ್ತದೆ ಆದರೆ ಈದ್ ಉಲ್-ಅಧಾ (ಬಕ್ರಾ ಈದ್, ಬಕ್ರೀದ್, ಈದ್ ಅಲ್-ಅಧಾ, ಈದ್ ಕುರ್ಬಾನ್ ಅಥವಾ ಕುರ್ಬಾನ್ ಬಯಾರಾಮಿ ಎಂದೂ ಕರೆಯಲಾಗುತ್ತದೆ) ಪ್ರಪಂಚದಾದ್ಯಂತ ಮುಸ್ಲಿಮರು ಆಚರಿಸುವ ಎರಡನೇ ಪ್ರಮುಖ ಇಸ್ಲಾಮಿಕ್ ಹಬ್ಬವಾಗಿದೆ. ಇಂಥ ಪವಿತ್ರ ಹಬ್ಬದಲ್ಲಿ ಹಣಕಾಸಿನ ವಿಚಾರಕ್ಕೆ ಹೊಡೆದಾಡಿಕೊಂಡಿರುವುದು ದುರಂತವಾಗಿದೆ ಎಂದು ಮುಸ್ಲಿಂ ಬಾಂಧವರು ಬೇಸರ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ