ಮತದಾರರ ಪಟ್ಟಿವಿಶೇಷ ಪರಿಷ್ಕರಣೆ: ಪತಪಟ್ಟಿಯಲ್ಲಿ ಹೆಸರಿಲ್ವಾ? ಈಗ ಸೇರಿಸಿ

Published : Jul 21, 2023, 04:53 AM IST
ಮತದಾರರ ಪಟ್ಟಿವಿಶೇಷ ಪರಿಷ್ಕರಣೆ: ಪತಪಟ್ಟಿಯಲ್ಲಿ ಹೆಸರಿಲ್ವಾ? ಈಗ ಸೇರಿಸಿ

ಸಾರಾಂಶ

  ಬೆಂಗಳೂರಿನಲ್ಲಿ ಜು.21ರಿಂದ ಆ.21ರವರೆಗೆ ಮತದಾರಪಟ್ಟಿವಿಶೇಷ ಪರಿಷ್ಕರಣೆ ನಡೆಯಲಿದ್ದು, ಮತದಾರರು ತಮ್ಮ ಹೆಸರು ಸೇರ್ಪಡೆ, ಹೆಸರು ಬದಲಾವಣೆ, ಸ್ಥಳ ಬದಲಾವಣೆ, ಮತದಾರ ಪಟ್ಟಿಯಿಂದ ಹೆಸರು ತೆಗೆಯುವುದು ಸೇರಿದಂತೆ ಮೊದಲಾದ ಪರಿಷ್ಕರಣೆ ಮಾಡಿಕೊಳ್ಳಬಹುದಾಗಿದೆ.

ಬೆಂಗಳೂರು (ಜು.21) :  ಬೆಂಗಳೂರಿನಲ್ಲಿ ಜು.21ರಿಂದ ಆ.21ರವರೆಗೆ ಮತದಾರಪಟ್ಟಿವಿಶೇಷ ಪರಿಷ್ಕರಣೆ ನಡೆಯಲಿದ್ದು, ಮತದಾರರು ತಮ್ಮ ಹೆಸರು ಸೇರ್ಪಡೆ, ಹೆಸರು ಬದಲಾವಣೆ, ಸ್ಥಳ ಬದಲಾವಣೆ, ಮತದಾರ ಪಟ್ಟಿಯಿಂದ ಹೆಸರು ತೆಗೆಯುವುದು ಸೇರಿದಂತೆ ಮೊದಲಾದ ಪರಿಷ್ಕರಣೆ ಮಾಡಿಕೊಳ್ಳಬಹುದಾಗಿದೆ.

ಭಾರತ ಚುನಾವಣಾ ಆಯೋಗ ಮತದಾರರ ಪಟ್ಟಿವಿಶೇಷ ಸಂಕ್ಷಿಪ್ತ ಪರಿಷ್ಕಣೆಗೆ ಜುಲೈ 21ರಿಂದ ಆಗಸ್ಟ್‌ 21ರ ವರೆಗೆ ಅವಕಾಶ ನೀಡಿದೆ. ಮತಗಟ್ಟೆಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಬಿಎಲ್‌ಒ ತಂತ್ರಾಂಶದ ಮೂಲಕ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸ ಮಾಡಲಿದ್ದಾರೆ. ಸಾರ್ವಜನಿಕರು, ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಮನವಿ ಮಾಡಲಾಗಿದೆ.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸೋದು ಹೇಗೆ? ಇಲ್ಲಿದೆ ಡೀಟೇಲ್ಸ್‌

ಅಧಿಕಾರಿಗಳ ಸಭೆ: ಮತದಾರರ ಪಟ್ಟಿವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಗುರುವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬೂತ್‌ ಅಧಿಕಾರಿಗಳು ಮನೆ ಮನೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬೂತ್‌ ಮಟ್ಟದ ಏಜೆಂಟ್‌ಗಳಲ್ಲಿ ಸ್ಥಳದಲ್ಲಿರಬೇಕು. ಬೂತ್‌ ಮಟ್ಟದ ಏಜೆಂಟ್‌ಗಳನ್ನು ನಿಯೋಜಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸ ಲಾಯಿತು. ವಿಶೇಷ ಪರಿಷ್ಕರಣೆ ಸಂಬಂಧ ಈಗಾಗಲೇ ಎಲ್ಲಾ 28 ವಿಧಾನಸಭಾ ಕ್ಷೇತ್ರದ ಮತಗಟ್ಟೆಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಬೂತ್‌ ಮಟ್ಟದ ಅಧಿಕಾರಿಗಳು ಕೊರತೆ ಇರುವ ಕಡೆ ಅಧಿಕಾರಿಗಳನ್ನು ನಿಯೋಜಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್‌ ಕುಮಾರ್‌ ಘೋಷ್‌, ಸಹಾಯಕ ಆಯುಕ್ತ ಅಜಯ್‌ ಉಪಸ್ಥಿತರಿದ್ದರು.

ಮೊಬೈಲ್‌ನಲ್ಲೇ ವೋಟರ್‌ ಲಿಸ್ಟ್‌ಗೆ ಅರ್ಜಿ ಹಾಕಿ: ಹೊಸ ಮತದಾರರ ನೋಂದಣಿಗೆ ಬಿಬಿಎಂಪಿ ಜಾಗೃತಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್