ಏ.1ರಿಂದ ಮತ್ತೆ ವಿದ್ಯುತ್‌ ದರ ಏರಿಕೆ ಶಾಕ್‌ ; ಪ್ರತಿ ಯುನಿಟ್‌ಗೆ ಎಷ್ಟು ಹೆಚ್ಚಳ?

Published : Jan 05, 2024, 06:54 AM IST
ಏ.1ರಿಂದ ಮತ್ತೆ ವಿದ್ಯುತ್‌ ದರ ಏರಿಕೆ ಶಾಕ್‌ ; ಪ್ರತಿ ಯುನಿಟ್‌ಗೆ ಎಷ್ಟು ಹೆಚ್ಚಳ?

ಸಾರಾಂಶ

ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ರಾಜ್ಯದ ಐದೂ ಎಸ್ಕಾಂಗಳು ಪ್ರತಿ ಯುನಿಟ್‌ಗೆ 50ರಿಂದ 60 ಪೈಸೆಯಷ್ಟು ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿವೆ.

ಬೆಂಗಳೂರು (ಜ. 5) ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ರಾಜ್ಯದ ಐದೂ ಎಸ್ಕಾಂಗಳು ಪ್ರತಿ ಯುನಿಟ್‌ಗೆ 50ರಿಂದ 60 ಪೈಸೆಯಷ್ಟು ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿವೆ.

ಯುನಿಟ್‌ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್‌ ಕೊನೆಯ ವಾರದಲ್ಲಿ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದ್ದು ಕೆಇಆರ್‌ಸಿಯು ಪರಿಶೀಲನೆ ನಡೆಸಿ ಬೆಸ್ಕಾಂ ಹಾಗೂ ಗ್ರಾಹಕರು ಇಬ್ಬರಿಗೂ ಹೊರೆಯಾಗದ ರೀತಿಯಲ್ಲಿ ಸದ್ಯದಲ್ಲೇ ದರ ಪರಿಷ್ಕರಣೆ ಮಾಡಲಿದೆ. ಪರಿಷ್ಕೃತ ದರವು 2024ರ ಏ.1ರಿಂದ ಅನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ. 

ನಾನೂ ಸಹ ರಾಮಭಕ್ತ, ರಾಮೋತ್ಸವ ಮಾಡುತ್ತೇನೆ: ಇಕ್ಬಾಲ್ ಹುಸೇನ್

ಇತರೆ ಎಸ್ಕಾಂಗಳಿಂದಲೂ ದರ ಪರಿಷ್ಕರಣೆಗೆ ಪ್ರಸ್ತಾಪ:

ಮಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಮೆಸ್ಕಾಂ), ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ (ಹೆಸ್ಕಾಂ), ಕಲಬುರಗಿ ವಿದ್ಯುತ್‌ ಸರಬರಾಜು ಕಂಪನಿ (ಜೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪನಿ (ಸೆಸ್ಕ್-ಮೈಸೂರು) ಸಹ ವಿದ್ಯುತ್‌ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ.

ಕೆಇಆರ್‌ಸಿ ಮೂಲಗಳ ಪ್ರಕಾರ ನಾಲ್ಕೂ ಎಸ್ಕಾಂಗಳು ಪ್ರತಿ ಯುನಿಟ್‌ಗೆ 50 ರಿಂದ 60 ಪೈಸೆಯಷ್ಟು ವಿದ್ಯುತ್‌ ದರ ಪರಿಷ್ಕರಣೆಗೆ ಮನವಿ ಮಾಡಿವೆ ಎಂದು ತಿಳಿದುಬಂದಿದೆ.

ಕಲ್ಲಿದ್ದಲು ಖರೀದಿ, ವಿದ್ಯುತ್‌ ಖರೀದಿ ಹಾಗೂ ವಿದ್ಯುತ್‌ ಸರಬರಾಜು ವೆಚ್ಚ ಸೇರಿದಂತೆ ಹಲವು ಕಾರಣಗಳಿಂದ ನಿರ್ವಹಣೆಗೆ ಹೊರೆಯಾಗುತ್ತಿದೆ. ಹೀಗಾಗಿ ನಷ್ಟ ಸರಿತೂಗಿಸಲು 2024-25ನೇ ಸಾಲಿಗೆ ವಿದ್ಯುತ್‌ ದರ ಪರಿಷ್ಕರಣೆ ಮಾಡುವಂತೆ ಕೆಇಆರ್‌ಸಿಗೆ ಮನವಿ ಮಾಡಿವೆ. 

ವಿಜಯಪುರ: ದಲಿತರ ಮನೆಗಳಿಗೆ ಮಂತ್ರಾಕ್ಷತೆ ವಿತರಿಸಿದ ಪೇಜಾವರ ಶ್ರೀಗಳು

ಎಸ್ಕಾಂಗಳು ಪ್ರತಿ ವರ್ಷದಂತೆ ಈ ವರ್ಷವೂ ದರ ಪರಿಷ್ಕರಣೆ ಪ್ರಸ್ತಾವನೆ ಸಲ್ಲಿಸಿವೆ. ಗೃಹ ಜ್ಯೋತಿ ಯೋಜನೆ ಜಾರಿ ಬಳಿಕ ಮೊದಲ ಬಾರಿಗೆ ಎಸ್ಕಾಂಗಳು ಬೆಲೆ ಏರಿಕೆ ಪ್ರಸ್ತಾಪ ಮಾಡಿವೆ. ದರ ಪರಿಷ್ಕರಣೆಯಿಂದ ಗೃಹ ಜ್ಯೋತಿ ಗ್ರಾಹಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ಗೃಹಜ್ಯೋತಿ ಯೋಜನೆಗೆ ಅರ್ಹತೆ ಪಡೆಯದ ಗೃಹ ಬಳಕೆದಾರರು ಹಾಗೂ ವಾಣಿಜ್ಯ ಗ್ರಾಹಕರಿಗೆ ಹೊರೆಯಾಗಲಿದೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್