
ಬೆಂಗಳೂರು (ಅ.25): ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ ಯುವಕನಿಗೆ ಕುಟುಂಬಸ್ಥರು ಸೇರಿ ಆಸ್ಪತ್ರೆಯಲ್ಲೇ ಕೇಕ್ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ದೃಶ್ಯ ನೆರೆದಿದ್ದವರ ಕಣ್ಣಲ್ಲಿ ನೀರು ತರಿಸಿದೆ.
ಕನಕಗಿರಿ ಮೂಲದ ಆರ್ಯನ್ ವಸ್ತ್ರದ ನಿನ್ನೆ ತನ್ನ ಹುಟ್ಟುಹಬ್ಬದ ದಿನವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನಲ್ಲೇ ವಾಸವಿದ್ದ ಆರ್ಯನ್ ವಸ್ತ್ರದ, ಇತ್ತೀಚೆಗೆ ಹಾಸನಕ್ಕೆ ಹೋಗುವ ವೇಳೆ ಬೈಕ್ ಅಪಘಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗೆಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆರ್ಯನ್ ಮೃತಪಟ್ಟಿದ್ದ.
ನಿನ್ನೆಯೇ ಆರ್ಯನ್ ವಸ್ತ್ರದ್ ಬರ್ತಡೇ ಇತ್ತು. ಹೀಗಾಗಿ ಆರ್ಯನ್ ಕೈಯಿಂದಲೇ ಕೇಕ್ ಕತ್ತರಿಸಿದ ಕುಟುಂಬಸ್ಥರು. ಈ ದೃಶ್ಯ ಕಂಡು ನೆರೆದಿದ್ದ ಜನರು ವೈದ್ಯರ ಕಣ್ಣಲ್ಲಿ ನೀರು ತರಿಸಿತು. ಒಂದು ಕಡೆ ಕುಟುಂಬಸ್ಥರ ಅಕ್ರಂದನ ಮುಗಿಲುಮುಟ್ಟಿತು.
ಸಾವಿನಲ್ಲಿಯೂ ಸಾರ್ಥಕತೆ:
ಆರ್ಯನ್ ಕುಟುಂಬ ಆತನ ಅಂಗಾಂಗಗಳನ್ನು ದಾನ ಮಾಡುವ ಮೂಲಕ, ಬೇರೆಯವರ ಬದುಕಿಗೆ ಜೀವದಾನ ನೀಡಿದೆ. ಆ ಮೂಲಕ ಆರ್ಯನ್ ಕುಟುಂಬಸ್ಥರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ