ಅಲ್ಪಸಂಖ್ಯಾತ ವಸತಿ ಶಾಲೆಗಳಲ್ಲಿ ಕನ್ನಡ ಕಲಿಕೆಗೆ ಒತ್ತು ನೀಡಿ: ಜಮೀರ್‌ ಸೂಚನೆ

Published : Jun 13, 2023, 04:37 AM IST
ಅಲ್ಪಸಂಖ್ಯಾತ ವಸತಿ ಶಾಲೆಗಳಲ್ಲಿ ಕನ್ನಡ ಕಲಿಕೆಗೆ ಒತ್ತು ನೀಡಿ: ಜಮೀರ್‌ ಸೂಚನೆ

ಸಾರಾಂಶ

 ಮೌಲಾನಾ ಅಜಾದ್‌ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಇಂಗ್ಲಿಷ್‌ ಜೊತೆಗೆ ಕನ್ನಡ ಕಲಿಕೆಗೂ ಹೆಚ್ಚು ಒತ್ತು ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್‌ ಸೂಚಿಸಿದ್ದಾರೆ. ಅವರು ಸೋಮವಾರ ಅಬ್ದುಲ್‌ ಕಲಾಂ ಅಜಾದ್‌ ಭವನದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.

ಬೆಂಗಳೂರು (ಜೂ.13) ಮೌಲಾನಾ ಅಜಾದ್‌ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಇಂಗ್ಲಿಷ್‌ ಜೊತೆಗೆ ಕನ್ನಡ ಕಲಿಕೆಗೂ ಹೆಚ್ಚು ಒತ್ತು ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್‌ ಸೂಚಿಸಿದ್ದಾರೆ.

ಅವರು ಸೋಮವಾರ ಅಬ್ದುಲ್‌ ಕಲಾಂ ಅಜಾದ್‌ ಭವನದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.

ಅಲ್ಪಸಂಖ್ಯಾತ ವಸತಿ ಶಾಲೆಗಳಲ್ಲಿ ಭಾಷೆ ಕಲಿಕೆ ವಿಚಾರದಲ್ಲಿ ಇಂಗ್ಲಿಷ್‌ ಜತೆಗೆ ಕನ್ನಡ ಕಲಿಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಕನ್ನಡ ಕಲಿಯಲು ಅಗತ್ಯ ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ ನೇಮಿಸಿಕೊಳ್ಳಬೇಕು. ಇಲ್ಲಿ ಈಗಾಗಲೇ ಇಂಗ್ಲಿಷ್‌ ಕಲಿಸುತ್ತಿದ್ದು, ಜತೆಗೆ ಕನ್ನಡ ಕಲಿಕೆಗೆ ಮಹತ್ವ ನೀಡಿ ಎಂದು ಹೇಳಿದರು.

ಆ.1ರಿಂದ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಸಚಿವ ಜಮೀರ್‌ ಜನತಾ ದರ್ಶನ

ತನಿಖೆಗೆ ಸೂಚನೆ: ಅಲ್ಪಸಂಖ್ಯಾತರ ಇಲಾಖೆ ಯೋಜನೆ ಮಾಹಿತಿ ನೀಡುವ ಸಲುವಾಗಿ ಸಹಾಯವಾಣಿ ನಿರ್ವಾಹಕರಿಗೆ ತಿಂಗಳಿಗೆ. 4ಲಕ್ಷ ವೇತನ ಪಾವತಿಸಿದ ಬಗ್ಗೆ ತನಿಖೆ ನಡೆಸುವಂತೆ ಸಚಿವರು ಸೂಚಿಸಿದರು. ಈವರೆಗೆ ಸಹಾಯವಾಣಿಯಿಂದ ಹೇಳಿಕೊಳ್ಳುವಂತ ಯಾವುದೇ ಪ್ರಯೋಜನ ಆಗಿಲ್ಲ. ಆದರೂ ಮುಂದುವರಿಸಿದ ಬಗ್ಗೆ ತನಿಖೆ ನಡೆಸಿ ವರದಿ ನೀಡಿ. ಸಹಾಯವಾಣಿ ಕೇಂದ್ರಕ್ಕೆ ವಾರ್ಷಿಕ . 2.5 ಕೋಟಿ ವೆಚ್ಚ ಮಾಡುತ್ತಿದ್ದರೂ ಪ್ರತ್ಯೇಕವಾಗಿ ಸಹಾಯವಾಣಿ ಅಗತ್ಯವೇನಿತ್ತು? ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕಿದೆ ಎಂದು ಸಚಿವರು ಹೇಳಿದರು.

ಹಜ್‌ ಭವನಕ್ಕೆ ಸಿದ್ದರಾಮಯ್ಯ 5000 ಕೋಟಿ ನೀಡಿಲ್ಲ: ಜಮೀರ್‌ ಅಹಮದ್‌ ಖಾನ್‌

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ವೇಳೆ ಡ್ರಾಪ್‌ಔಟ್‌ ಆಗದಂತೆ ಕ್ರಮ ವಹಿಸಲು ತಿಳಿಸಿರುವ ಅಗತ್ಯ ಇರುವೆಡೆ ವಸತಿಶಾಲೆ ನಿರ್ಮಿಸಲು ಸೂಚಿಸಿದ್ದಾರೆ. ರಾಜ್ಯದ ಎಲ್ಲ ತಾಲೂಕಲ್ಲಿ ವಸತಿಸಹಿತ ಶಾಲಾ ಕಾಲೇಜು ವ್ಯವಸ್ಥೆ ಕಡ್ಡಾಯವಾಗಿರುವಂತೆ ಇರುವಂತೆ ನೋಡಿಕೊಳ್ಳಿ ಎಂದರು.

ಇಲಾಖೆ ಕಾರ್ಯದರ್ಶಿ ಮನೋಜ… ಜೈನ್‌, ನಿರ್ದೇಶಕ ರಾಘವೇಂದ್ರ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್