ರವಿಶಂಕರ ಗುರೂಜಿ ವಿರುದ್ಧ ಒತ್ತುವರಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

Kannadaprabha News   | Kannada Prabha
Published : Mar 26, 2026, 06:54 AM ISTUpdated : Mar 26, 2026, 06:55 AM IST
highcourt

ಸಾರಾಂಶ

ಬೆಂಗಳೂರು ದಕ್ಷಿಣದ ಕಗ್ಗಲೀಪುರದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದ ಮೇಲೆ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ವಿರುದ್ಧ ಬಿಎಂಟಿಎಫ್ ದಾಖಲಿಸಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಬೆಂಗಳೂರು (ಮಾ.26): ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದ ಸಂಬಂಧ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್‌ಐಆರ್ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ರವಿಶಂಕರ್‌ ವಿರುದ್ಧದ ಪ್ರಕರಣ ರದ್ದುಪಡಿಸಿರುವ ನ್ಯಾಯಪೀಠ, ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಗಳಿಗೆ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೇ ನಂಬರ್ 46, 135, 137, 150, 160, 164/1 ಮತ್ತು 164/2ರಲ್ಲಿನ ವಿವಿಧೆಡೆ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಮಾಡಿದ ಆರೋಪ ಅರ್ಜಿದಾರರ ಮೇಲಿತ್ತು. ಈ ಹಿನ್ನೆಲೆಯಲ್ಲಿ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿತ್ತು.

ಅದನ್ನು ರದ್ದುಪಡಿಸಲು ಕೋರಿದ್ದ ರವಿಶಂಕರ್‌ ಗುರೂಜಿ, ತಾವು ಯಾವುದೇ ಆಸ್ತಿ ಹೊಂದಿರುವ ಅಥವಾ ಯಾವುದೇ ಭೂಮಿಯನ್ನು ಅತಿಕ್ರಮಿಸಿರುವುದನ್ನು ಬಿಎಂಟಿಎಫ್‌ ವರದಿ ತೋರಿಸುವುದಿಲ್ಲ. ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರ ವಿರುದ್ಧ ಒತ್ತುವರಿ ಮಾಡಿರುವ ಆರೋಪವಿದೆ. ಆದರೆ, ಈ ಯಾವುದೇ ಪ್ರದೇಶ ತಮ್ಮ ಆಶ್ರಮದ ಕಾಂಪೌಂಡ್ ಒಳಗೆ ಬರುವುದಿಲ್ಲ ಎಂದು ಆಕ್ಷೇಪಿಸಿದ್ದರು.

ಅರ್ಜಿಗೆ ಆಕ್ಷೇಪಿಸಿದ್ದ ಸರ್ಕಾರಿ ಅಭಿಯೋಜಕರು, ರವಿಶಂಕರ್‌ ಗುರೂಜಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಗಳಿವೆ. ಈ ಹಂತದಲ್ಲಿ ತನಿಖೆ ತಡೆಯಬಾರದು. ತನಿಖೆ ಮುಂದುವರಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜನರ ವಯಸ್ಸು ನೋಡಿ, ಮದ್ಯ ಮಾರಿ, ಆಧಾರ್‌ ಕಾರ್ಡ್ ಪರಿಶೀಲನೆ ಕಡ್ಡಾಯಗೊಳಿಸಿ ಹೈಕೋರ್ಟ್‌ ಮಹತ್ವದ ಆದೇಶ
ಆರ್ಥಿಕ ಪ್ರಗತೀಲಿ ರಾಜ್ಯ ಸರ್ಕಾರ ಕೇಂದ್ರಕ್ಕಿಂತ ಬೆಸ್ಟ್‌