ಬೆಂಗಳೂರಿನ ಮಂತ್ರಿ ಡೆವಲಪರ್ಸ್ ಮೇಲೆ ಇಡಿ ದಾಳಿ: ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ದೆಹಲಿ ಅಧಿಕಾರಿಗಳು!

Published : Mar 16, 2026, 04:57 PM IST
Mantri Developers ED raid

ಸಾರಾಂಶ

ಬೆಂಗಳೂರಿನ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆ ಮಂತ್ರಿ ಡೆವಲಪರ್ಸ್ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ಸಂಸ್ಥೆಯ ನಿರ್ದೇಶಕ ಸುಶೀಲ್ ಮಂತ್ರಿ ಅವರ ನಿವಾಸ ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳು ಶೋಧ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಹಿಂದೆ 2022 ಮತ್ತು 2023ರಲ್ಲಿಯೂ ಸಂಸ್ಥೆಯ ಮೇಲೆ ಇಡಿ ಕ್ರಮ ಕೈಗೊಂಡಿತ್ತು.

ಬೆಂಗಳೂರು: ನಗರದಲ್ಲಿರುವ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ಮಂತ್ರಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ (Mantri Developers Pvt Ltd) ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ. ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಯಿಂದ ಆಗಮಿಸಿದ ಅಧಿಕಾರಿಗಳು ಬೆಳಿಗ್ಗೆ ವೇಳೆಯಲ್ಲೇ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮಾಹಿತಿಯ ಪ್ರಕಾರ, ಸುಮಾರು ಆರು ವಾಹನಗಳಲ್ಲಿ ಬಂದ 10 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸಂಸ್ಥೆಯ ಕಚೇರಿ ಮತ್ತು ನಿರ್ದೇಶಕರ ನಿವಾಸಗಳಲ್ಲಿ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ವಿಶೇಷವಾಗಿ ಕಂಪನಿಯ ನಿರ್ದೇಶಕರಾದ Sushil Mantri ಅವರ ನಿವಾಸ ಹಾಗೂ ಕಚೇರಿ ಆವರಣದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕೇಸ್

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಗ್ರಾಹಕರಿಂದ ಅಪಾರ್ಟ್ಮೆಂಟ್ ಖರೀದಿಗೆಂದು ಪಡೆದ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಿಕೊಂಡು, ವಿದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯಲ್ಲಿರುವ ಸುಶೀಲ್ ಮಂತ್ರಿ ಅವರ ನಿವಾಸ ಹಾಗೂ ಇನ್‌ಫೆಂಟ್ರಿ ರಸ್ತೆಯಲ್ಲಿರುವ ಮತ್ತೊಂದು ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 14ಕ್ಕೂ ಹೆಚ್ಚು ಅಧಿಕಾರಿಗಳು ತಂಡವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

2022ರಲ್ಲಿ ಕೂಡ ದಾಳಿಯಾಗಿತ್ತು

ಈ ಪ್ರಕರಣದಲ್ಲಿ ಇಡಿ ಮೊದಲ ಬಾರಿಗೆ ಕ್ರಮ ಕೈಗೊಂಡಿರುವುದು ಅಲ್ಲ. ಈ ಹಿಂದೆ 2022ರಲ್ಲಿ ಕೂಡ ಇದೇ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಂತ್ರಿ ಡೆವಲಪರ್ಸ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ನಂತರ 2023ರಲ್ಲಿ ನಡೆದ ತನಿಖೆಯ ಭಾಗವಾಗಿ ಕಂಪನಿಗೆ ಸೇರಿದ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಇಡಿ ಜಪ್ತಿ ಮಾಡಿತ್ತು.

ಗ್ರಾಹಕರಿಂದ ಅಪಾರ್ಟ್ಮೆಂಟ್ ನಿರ್ಮಾಣಕ್ಕೆಂದು ದೊಡ್ಡ ಮೊತ್ತದ ಹಣವನ್ನು ಪಡೆದು, ಅದನ್ನು ಯೋಜನೆಗಳಿಗೆ ಬಳಸದೇ ವಿದೇಶಗಳಲ್ಲಿ ಹೂಡಿಕೆ ಮಾಡಲಾಗಿದೆ ಎಂಬ ಆರೋಪಗಳು ಎದುರಾಗಿದ್ದವು. ಈ ಹಿನ್ನೆಲೆಯಲ್ಲಿ ಹಣಕಾಸು ವ್ಯವಹಾರಗಳ ಕುರಿತು ಇಡಿ ತನಿಖೆ ಆರಂಭಿಸಿತ್ತು.

ಪ್ರಸ್ತುತ ನಡೆದಿರುವ ದಾಳಿಯಲ್ಲಿ ಕಂಪನಿಯ ಹಣಕಾಸು ವ್ಯವಹಾರಗಳು, ಬ್ಯಾಂಕ್ ದಾಖಲೆಗಳು ಮತ್ತು ಇತರ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ತನಿಖೆಯ ಮುಂದಿನ ಹಂತದಲ್ಲಿ ಇನ್ನಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ, ಬೆಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲೊಂದು ಎನ್ನಲ್ಪಡುವ ಮಂತ್ರಿ ಡೆವಲಪರ್ಸ್ ಮೇಲೆ ಮತ್ತೊಮ್ಮೆ ಇಡಿ ದಾಳಿ ನಡೆದಿರುವುದು ರಿಯಲ್ ಎಸ್ಟೇಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತನಿಖೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಇನ್ನಷ್ಟು ವಿವರಗಳು ಬಹಿರಂಗವಾಗುವ ನಿರೀಕ್ಷೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೂಡುಬಿದಿರೆ ಪೊಲೀಸಪ್ಪನ ಪೋಲಿ ಆಟ; ಗಂಡನ ಬಿಡುಗಡೆಗೆ 25 ಲಕ್ಷ ಕೊಡಿ, ಇಲ್ಲವೇ ನನ್ನೊಂದಿಗೆ ಮಲಗು ಎನ್ನುವ ಸಂದೇಶ!
ಬಿಸಿಲ ಝಳ, ವಿಪರೀತ ಸೆಕೆ ನಡುವೆ ರಾಜ್ಯ ಹವಾಮಾನದ ಅಚ್ಚರಿ! ಮಾರ್ಚ್ 21ರವರೆಗೆ ಮಳೆ ಮುನ್ಸೂಚನೆ!