ಸಚಿವರ ಮೌಖಿಕ ಆದೇಶ ಪಾಲಿಸದ ಎಂಜಿನಿಯರ್‌ ಅಮಾನತು!

Published : May 02, 2020, 12:29 PM IST
ಸಚಿವರ ಮೌಖಿಕ ಆದೇಶ ಪಾಲಿಸದ ಎಂಜಿನಿಯರ್‌ ಅಮಾನತು!

ಸಾರಾಂಶ

ಚಳ್ಳಕೆರೆಗೆ ನೀರು ಬಿಡದ್ದಕ್ಕೆ ಶಿಸ್ತು ಕ್ರಮ| ಸಚಿವರ ಮಾತು ಕೇಳದ್ದಕ್ಕೆ ಎಂಜಿನಿಯರ್‌ ಅಮಾನತು

ಚಿತ್ರದುರ್ಗ(ಮೇ.02): ಚಳ್ಳಕೆರೆ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಹಿರಿಯೂರಿನ ವಿವಿ ಸಾಗರದಿಂದ ಕುಡಿಯುವ ನೀರು ಪೂರೈಸುವಂತೆ ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಮೌಖಿಕವಾಗಿ ನೀಡಿದ ಆದೇಶ ಉಲ್ಲಂಘಿಸಿದ ಕಾರಣ, ಭದ್ರಾ ಮೇಲ್ದಂಡೆ ಯೋಜನೆಯ ಅಧೀಕ್ಷಕ ಎಂಜಿನಿಯರ್‌ ಕೆ.ಎಂ.ಶಿವಪ್ರಕಾಶ್‌ರನ್ನು ಅಮಾನತು ಮಾಡಲಾಗಿದೆ.

ವಿವಿ ಸಾಗರ ಜಲಾಶಯದಿಂದ ಚಳ್ಳಕೆರೆಗೆ ಕುಡಿಯಲೆಂದು 0.25 ಟಿಎಂಸಿ ನೀರು ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿತ್ತು. ಆದರೆ, ಏ.28ರಂದು ಶಾಸಕಿ ಪೂರ್ಣಿಮಾ ಜಲಾಶಯಕ್ಕೆ ಆಗಮಿಸಿ, ನೀರು ನಿಲ್ಲಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದರು. ವಿಷಯ ತಿಳಿದ ಜಾರಕಿಹೊಳಿ ಯಾವುದೇ ಕಾರಣಕ್ಕೂ ನೀರು ನಿಲ್ಲಿಸಬಾರದು ಎಂದು ದೂರವಾಣಿ ಮೂಲಕ ಸೂಚಿಸಿದ್ದರು.

ಸಚಿವರು ಸೂಚಿಸಿದ್ದಾರೆ ನೀರು ನಿಲ್ಲಿಸಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಹೇಳಿದರೂ, ಸ್ವತಃ ಪೂರ್ಣಿಮಾ ತಾವೇ ಡಿಸ್‌ಜಾಜ್‌ರ್‍ ಗೇಟ್‌ ಬಂದ್‌ ಮಾಡಲು ಮುಂದಾಗಿದ್ದರು. ಕೊನೆಗೆ ಅಸಹಾಯಕಾರದ ಶಿವಪ್ರಕಾಶ್‌, ನೀರು ನಿಲ್ಲಿಸಲು ಸಹಕರಿಸಿದ್ದರು. ಇದರಿಂದ ಎಂಜಿನಿಯರ್‌ರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!
Puneeth Rajkumar ಸಮಾಧಿಗೆ ನಮಿಸಿದ 'ಕಾಕ್ರೋಚ್ ಜನತಾ ಪಾರ್ಟಿ'! ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸಾಥ್!