ವೀರಶೈವ ಲಿಂಗಾಯತ ಸಭೆ ಈಶ್ವರ ಖಂಡ್ರೆ ರಾಷ್ಟ್ರಾಧ್ಯಕ್ಷ

Kannadaprabha News   | Kannada Prabha
Published : Jan 21, 2026, 06:34 AM IST
Eshwar Khandre

ಸಾರಾಂಶ

ಕಾಂಗ್ರೆಸ್‌ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು : ಕಾಂಗ್ರೆಸ್‌ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆ

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ, ಮಂಗಳವಾರ ನಗರದಲ್ಲಿ ನಡೆದ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಲ್ಲ ಸದಸ್ಯರೂ ಸಹಮತ ವ್ಯಕ್ತಪಡಿಸಿದ್ದರಿಂದ ಈಶ್ವರ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕಳೆದ 13 ವರ್ಷದಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಖಂಡ್ರೆ ಅವರು ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು ಎಂದು ವಿವರಿಸಿದರು.

ಶಾಮನೂರು ಶಿವಶಂಕರಪ್ಪ ಅವರ ನಿಧನನದ ಹಿನ್ನೆಲೆ ತೆರವಾಗಿದ್ದ ಹುದ್ದೆ

ಶಾಮನೂರು ಶಿವಶಂಕರಪ್ಪ ಅವರ ನಿಧನನದ ಹಿನ್ನೆಲೆಯಲ್ಲಿ ಮಹಾಸಭಾ ಅಧ್ಯಕ್ಷ ಗಾದಿಗೆ ರಾಜಕೀಯ ಮುಖಂಡರು, ಸ್ವಾಮೀಜಿಗಳ ಹೆಸರು ಕೇಳಿಬಂದಿತ್ತು. ಆದರೆ ಮಂಗಳವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಶ್ವರ ಖಂಡ್ರೆ ಅವರಿಗೇ ಜವಾಬ್ದಾರಿ ವಹಿಸಲು ತೀರ್ಮಾನಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಗಣೇಶ್ ಶಾಮನೂರು, ಪ್ರಭಾಕರ ಕೋರೆ, ರಾಜಣ್ಣ, ವೀರಣ್ಣ ಚರಂತಿ ಮಠ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಘಟಕದ ಅಧ್ಯಕ್ಷರು, ಪ್ರತಿನಿಧಿಗಳು ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಗಡಿ ವಿವಾದಕ್ಕೆ ಇಂದು ಸುಪ್ರೀಂ ಪರೀಕ್ಷೆ
ಮಂಡ್ಯ ಜಿಲ್ಲೆಯಿಂದ ಜೆಡಿಎಸ್ ಓಡಿಸದಿದ್ದರೆ ಭವಿಷ್ಯವಿಲ್ಲ : ಚಲುವರಾಯಸ್ವಾಮಿ