
ಮಲ್ಲಿಕಾರ್ಜುನ ಹೊಸಮನಿ
ಬಾದಾಮಿ(ಫೆ.19): ತಂದೆ ಸಿದ್ದರಾಮಯ್ಯ ಅವರೇ ತಮ್ಮ ಪಾಲಿಗೆ ಮುಖ್ಯಮಂತ್ರಿ ಎಂಬ ಶಾಸಕ ಯತೀಂದ್ರ ಹೇಳಿಕೆಗೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಟಾಂಗ್ ನೀಡಿದ್ದಾರೆ.
ಕೆಲವರು ಮುಖ್ಯಮಂತ್ರಿ ಸ್ಥಾನವನ್ನು ವಂಶದ ಆಸ್ತಿ ಎಂದು ತಿಳಿದಿದ್ದಾರೆ ಎಂದು ಯತೀಂದ್ರ ಅವರಿಗೆ ಕಿಚಾಯಿಸಿರುವ ಈಶ್ವರಪ್ಪ, ಮುಖ್ಯಮಂತ್ರಿ, ಪ್ರಧಾನಮಂತ್ರಿ ಯಾರಾಗಬೇಕೆಂಬುದು ಜನತೆ ನಿರ್ಧರಿಸಲಿದ್ದಾರೆ ಎಂದು ಹೇಳಿದರು.
ಬಾದಾಮಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಕೂಡ ಹೋದಲ್ಲಿ ಬಂದಲ್ಲಿ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ, ಇಂತಹ ಕೀಳು ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಎಂದು ಮಾಜಿ ಸಿಎಂ ಕಾಲೆಳೆದರು.
"
ಇದೇ ವೇಳೆ ಈಶ್ವರಪ್ಪ ತಲೆಯಲ್ಲಿ ಮೆದುಳಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ಸಿದ್ದರಾಮಯ್ಯ ಅವರ ಕುರಿತು ಹೇಳುವುದು ಬಹಳಷ್ಟಿದೆ, ಇನ್ನು ನಾಲ್ಕು ದಿನಗಳಲ್ಲಿ ಹೇಳಬೇಕಿರುವುದನ್ನೆಲ್ಲಾ ಹೇಳುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು.
ಇನ್ನು ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆಯಲ್ಲಿ ಕಮಲ ಅರಳುವುದು ಗ್ಯಾರಂಟೀ ಎಂದ ಈಶ್ವರಪ್ಪ, ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎಂಬುದು ರಾಜ್ಯದ ಜನರ ಬಯಕೆಯಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ