ಪ್ರತಿಭಾ ಶೋಧ ಪರೀಕ್ಷೆ ರದ್ದಾಗಿ 3 ವರ್ಷವಾದ್ರೂ ಶುಲ್ಕ ವಾಪಸ್ಸಿಲ್ಲ: 2.66 ಕೋಟಿ ಹಣ ಏನಾಯ್ತು?

Published : Aug 30, 2024, 10:13 AM IST
ಪ್ರತಿಭಾ ಶೋಧ ಪರೀಕ್ಷೆ ರದ್ದಾಗಿ 3 ವರ್ಷವಾದ್ರೂ ಶುಲ್ಕ ವಾಪಸ್ಸಿಲ್ಲ: 2.66 ಕೋಟಿ ಹಣ ಏನಾಯ್ತು?

ಸಾರಾಂಶ

ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2021-22ನೇ ಸಾಲಿನಲ್ಲಿ ನಡೆಸಬೇಕಿದ್ದ ರಾಷ್ಟ್ರೀಯ ಪ್ರತಿಭಾ ಶೋಧ ಪರೀಕ್ಷೆ (ಎನ್‌ಟಿಎಸ್‌ಇ) ರದ್ದಾಗಿ ಮೂರು ವರ್ಷ ಕಳೆದರೂ ಪರೀಕ್ಷೆಗೆ ಮಕ್ಕಳಿಂದ ಸಂಗ್ರಹಿಸಿದ್ದ ಕೋಟ್ಯತರ ರು. ಶುಲ್ಕವನ್ನು ಇದುವರೆಗೂ ವಾಪಸ್ ಶಿಕ್ಷಣ ನೀಡಿಲ್ಲ. 

ಬೆಂಗಳೂರು (ಆ.30): ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2021-22ನೇ ಸಾಲಿನಲ್ಲಿ ನಡೆಸಬೇಕಿದ್ದ ರಾಷ್ಟ್ರೀಯ ಪ್ರತಿಭಾ ಶೋಧ ಪರೀಕ್ಷೆ (ಎನ್‌ಟಿಎಸ್‌ಇ) ರದ್ದಾಗಿ ಮೂರು ವರ್ಷ ಕಳೆದರೂ ಪರೀಕ್ಷೆಗೆ ಮಕ್ಕಳಿಂದ ಸಂಗ್ರಹಿಸಿದ್ದ ಕೋಟ್ಯತರ ರು. ಶುಲ್ಕವನ್ನು ಇದುವರೆಗೂ ವಾಪಸ್ ಶಿಕ್ಷಣ ನೀಡಿಲ್ಲ. ರಾಷ್ಟ್ರೀಯ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ (ಎನ್ ಸಿಇಆರ್‌ಟಿ) ನಿರ್ದೇ ಶನದಂತೆ 2021-22ನೇ ಸಾಲಿನಲ್ಲಿ ರಾಜ್ಯ ಶಿಕ್ಷಣ ಇಲಾಖೆಯು ಅಂದು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತಹಾಗೂ ಅನುದಾನರಹಿತ ಖಾಸಗಿ ಪ್ರೌಢಶಾಲೆಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 3,23,750 ವಿದ್ಯಾರ್ಥಿಗಳಿಂದ ಒಟ್ಟು 2,66,72,717 ರು. ಎನ್‌ಟಿಎಸ್‌ಇ ಪರೀಕ್ಷಾ ಶುಲ್ಕ ಸಂಗ್ರಹಿಸಿತ್ತು. 

ಆದರೆ, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಎನ್‌ಸಿಇಆರ್‌ಟಿ ಆ ವರ್ಷ ಎನ್ಟಿಎಸ್‌ಇ ಪರೀಕ್ಷೆ ರದ್ದುಪಡಿಸಿದ್ದರಿಂದ ವಿದ್ಯಾರ್ಥಿಗಳಿಂದ ಪಡೆದಿದ್ದ ಶುಲ್ಕವನ್ನು ವಾಪಸ್ ನೀಡಬೇಕಿತ್ತು. ಆದರೆ, ಮೂರು ವರ್ಷ ಕಳೆದರೂ ಶುಲ್ಕವನ್ನು ಮಕ್ಕಳಿಗೆ ವಾಪಸ್ ಕೊಡದೆ ಇಲಾಖೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ ಎಂಬ ಆರೋಪ ಕೇಳಿಬಂದಿದೆ. ಯಾವುದೇ ಪರೀಕ್ಷೆರದ್ದಾದರೆ ಅದು ಯಾವ ಕಾರಣಕ್ಕೆ ರದ್ದುಪಡಿಸಲಾಗಿದೆ. ಪರೀಕ್ಷೆಗೆ ಪಡೆದ ಶುಲ್ಕವನ್ನು ಯಾವಾಗ ವಾಪಸ್ ನೀಡಲಾಗು ವುದು. ಅಥವಾ ವಾಪಸ್ ನೀಡಲಾಗುತ್ತದೋ, ಇಲ್ಲವೋ ಎಂಬ ಬಗ್ಗೆಯಾದರೂ ಸ್ಪಷ್ಟ ಮಾಹಿತಿ ನೀಡಬೇಕಾದ್ದು ಇಲಾಖಾ ಕರ್ತವ್ಯ. ಆದರೆ, ಇದುವರೆಗೂ ಈ ಬಗ್ಗೆ ಅಧಿ ಕಾರಿಗಳು ಯಾವುದೇ ಉತ್ತರ, ಸ್ಪಷ್ಟನೆಯನ್ನೂ ನೀಡದೆನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದಾರೆ ಎಂಬ ಅಧಿಕಾರಿಗಳ  ದೂರುಗಳು ಕೇಳಿಬರುತ್ತಿವೆ. 

ಈ ಸಂಬಂಧ ರಾಜ್ಯದ ವಿವಿಧ ಖಾಸಗಿ ಶಾಲಾ ಸಂಘಟನೆಗಳು ಎನ್‌ಟಿಎಸ್‌ಇ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂತಿರುಗಿಸು ವಂತೆ ಸರ್ಕಾರವನ್ನು ಒತ್ತಾಯಿಸಿವೆ. ಈ ಸಂಬಂಧ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿರುವ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘದ (ಅವರ್ ಸ್ಕೂಲ್) ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಅರಸ್, ಪರೀಕ್ಷೆ ರದ್ದಾಗಿ ಮೂರು ವರ್ಷವಾದರೂ ಶುಲ್ಕ ವಾಪಸ್ ನೀಡದೆ ಅಧಿಕಾರಿಗಳು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್ ಕೊಡಿಸಲು ಕ್ರಮ ವಹಿಸುವಂತೆ ಕೋರಿದ್ದಾರೆ. ಈ ಮಧ್ಯೆ,ಎನ್‌ಟಿಎಸ್‌ಇ ಪರೀಕ್ಷೆ ರದ್ದಿಗೆ ಅಧಿಕೃತ ಕಾರಣ ನೀಡುವಂತೆ ಹಾಗೂ ಶುಲ್ಕ ವಾಪಸ್ ನೀಡದ ಬಗ್ಗೆ ಅವರ್ ಸ್ಕೂಲ್ಸ್ ಆರ್ ಟಿಐ ಮೂಲಕ ಇಆರ್‌ಟಿಗೆ ಮಾಹಿತಿ ಕೋರಿದ್ದು, ಇದಕ್ಕೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಪರೀಕ್ಷೆ ರದ್ದುಪಡಿಸಲಾಗಿದೆ. 

ದರ್ಶನ್ ಶಿಫ್ಟಿಗೂ ಬಳ್ಳಾರಿ ಉಸ್ತುವಾರಿ ಜಮೀರ್‌ಗೂ ಸಂಬಂಧವಿಲ್ಲ: ಸಚಿವ ಪರಮೇಶ್ವರ್

ವಿದ್ಯಾರ್ಥಿಗಳಿಂದ ಪಡೆದ ಶುಲ್ಕದ ಬಗ್ಗೆ ತಮ್ಮ ರಾಜ್ಯದ ಸಂಬಂಧಿಸಿದ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದೆ. ಆದರೆ, ಈ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆಗೆ ಹಲವು ಬಾರಿ ಪತ್ರ ಬರೆದರೂ ಯಾವುದೇ ಉತ್ತರದೊರಕಿಲ್ಲ.3.23ಲಕ್ಷವಿದ್ಯಾರ್ಥಿಗಳಿಂದ ತಲಾ 80 ರು.ನಂತೆ ಶುಲ್ಕ ಸಂಗ್ರಹಿಸಲಾಗಿದೆ. ಇದು ವೈಯಕ್ತಿಕವಾಗಿ ಸಣ್ಣಮೊತ್ತವೆನಿಸಿದರೂ, ಸಂಗ್ರಹವಾದ ಒಟ್ಟು ಶುಲ್ಕ ಮೊತ್ತ 2.66 ಕೋಟಿ ರು.ಗೂ ಹೆಚ್ಚು. ಇದನ್ನು ವಾಪಸ್ ನೀಡುವ ಅಥವಾ ಬೇರೆ ಯಾವುದೇ ಕಾರ್ಯಕ್ಕೆ ಬಳಸಲಾಗಿದೆಯಾ ಎಂಬ ಬಗ್ಗೆ ಮಾಹಿತಿ ನೀಡಬೇಕಾದ್ದು ಇಲಾಖೆಯ ಕರ್ತವ್ಯ. ಕೂಡಲೇ ಉತ್ತರ ನೀಡಬೇಕು ಎಂದು ಖಾಸಗಿ ಶಾಲಾ ಸಂಘಟನೆಗಳ ಪ್ರತಿನಿಧಿಗಳು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ