ದೈವಾರಾಧನೆ ಪ್ರದರ್ಶನವಲ್ಲ; ಪ್ರತಿಭಾ ಕಾರಂಜಿಯಲ್ಲಿ ಬಳಸಬೇಡಿ: ಸುನೀಲ್ ಕುಮಾರ್

Published : Jul 06, 2023, 01:29 PM IST
ದೈವಾರಾಧನೆ ಪ್ರದರ್ಶನವಲ್ಲ; ಪ್ರತಿಭಾ ಕಾರಂಜಿಯಲ್ಲಿ ಬಳಸಬೇಡಿ:  ಸುನೀಲ್ ಕುಮಾರ್

ಸಾರಾಂಶ

ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ. ಶಾಲಾ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದು ಕೈಬಿಡಬೇಕು ಎಂದು ಶೂನ್ಯವೆಳೆಯಲ್ಲಿ ಮಾಜಿ ಸಚಿವ ಸುನೀಲ್ ಕುಮಾರ ಒತ್ತಾಯಿಸಿದರು.

ಬೆಂಗಳೂರು (ಜು.6) : ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ. ಶಾಲಾ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದು ಕೈಬಿಡಬೇಕು ಎಂದು ಮಾಜಿ ಸಚಿವ ಸುನೀಲ್ ಕುಮಾರ ಒತ್ತಾಯಿಸಿದರು.

ಶೂನ್ಯ ವೇಳೆಯಲ್ಲಿ ದೈವರಾಧಾನೆ ಕುರಿತ ಪ್ರಸ್ತಾಪಿಸಿದ ಅವರು, ಕೋಲ, ದೈವರಾಧಾನೆ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪ್ರದರ್ಶನ ಮಾಡುವಂತದ್ದಲ್ಲ. ಹೀಗಿದ್ದೂ ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿಯಲ್ಲಿ ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ.  ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ದನಿಗೂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ. ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನಿಡಿದರು.

ತುಳುನಾಡಿನ ಆರಾಧನೆಗಳಲ್ಲಿ ಪ್ರಮುಖವಾಗಿರು ಭೂತರಾಧನೆ.  ಇದನ್ನು 'ದೈವಾರಾಧನೆ' ಎಂದೂ ಕರೆಯುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಕೇರಳ ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ವಿಶೇಷವಾಗಿ ಕಂಡುಬರುವ ಒಂದು ರೀತಿಯ ಆರಾಧಾನೆ. ತುಂಬಾ ಭಯ, ಭಕ್ತಿಯಿಂದ ಆರಾಧಿಸಲಾಗುತ್ತದೆ. 

ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!